ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಭೀಮ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತತ್ತರಿಸಿ ಹೋಗಿವೆ.
ಕೃಷಿ ಭೂಮಿ, ಗ್ರಾಮಗಳೇ ಜಲಾವೃತಗೊಂಡಿದ್ದು, ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ತೀವ್ರ ಕಂಗಾಲಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.
ಇದನ್ನು ಓದಿ : ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು
ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು, ವಿವರಗಳನ್ನು ನೀಡಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ ವೈಮಾನಿಕ ಸಮೀಕ್ಷೆ ನಡೆಸಿದರು.
ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆ ನಡೆಸಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…