Mysore
21
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ರಾಜ್ಯ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆ ಶಿವಮೊಗ್ಗ, ಮೈಸೂರು, ಬೆಂಗಳೂರಿನಲ್ಲಿ ಕಂಬಳ ಆಯೋಜನೆ

ಮಂಗಳೂರು: ಕಂಬಳಕ್ಕೆ ರಾಜ್ಯದ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ, ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ.

ರಾಜ್ಯದ ವಿವಿಧೆಡೆ ಕಂಬಳ ಆಯೋಜಿಸಲು ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಂಬಳ ಸಂಸ್ಥೆಯ ಅಧ್ಯಕ್ಷ ದೇವಿ ಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಮೈಸೂರಿನಲ್ಲಿ ಕಂಬಳ ಆಯೋಜನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಸಂಸ್ಥೆಯ ಪ್ರತಿನಿಧಿಗಳು ಮೈಸೂರಿಗೆ ತೆರಳಿ ಪರಿಶೀಲನೆ ನಡೆಸಿದ್ದು, ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವ ಉದ್ದೇಶವಿದೆ ಎಂದು ಹೇಳಿದರು.

ಶಿವಮೊಗ್ಗ ಹಾಗೂ ಬೆಂಗಳೂರಿನಲ್ಲಿ ಕೂಡ ಕಂಬಳ ಆಯೋಜನೆಗೆ ಅವಕಾಶ ಸಿಗುವ ಭರವಸೆ ಇದೆ. ಉತ್ತರ ಕನ್ನಡದಲ್ಲಿ ಕಂಬಳ ಆಯೋಜಿಸಲು ಸಚಿವ ಮಂಕಾಳ ವೈದ್ಯ ಉತ್ಸಾಹ ತೋರಿಸಿದ್ದಾರೆ. ಅಲ್ಲದೇ ಕಂಬಳದಲ್ಲಿ ತೊಡಗಿಸಿಕೊಂಡವರಿಗೆ ಕಾರ್ಮಿಕ ಕಾರ್ಡ್‌ ನೀಡುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ಹೇಳಿದರು.

 

Tags:
error: Content is protected !!