ರಾಜ್ಯ

ರಾಜ್ಯ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆ ಶಿವಮೊಗ್ಗ, ಮೈಸೂರು, ಬೆಂಗಳೂರಿನಲ್ಲಿ ಕಂಬಳ ಆಯೋಜನೆ

ಮಂಗಳೂರು: ಕಂಬಳಕ್ಕೆ ರಾಜ್ಯದ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ, ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ.

ರಾಜ್ಯದ ವಿವಿಧೆಡೆ ಕಂಬಳ ಆಯೋಜಿಸಲು ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಂಬಳ ಸಂಸ್ಥೆಯ ಅಧ್ಯಕ್ಷ ದೇವಿ ಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಮೈಸೂರಿನಲ್ಲಿ ಕಂಬಳ ಆಯೋಜನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಸಂಸ್ಥೆಯ ಪ್ರತಿನಿಧಿಗಳು ಮೈಸೂರಿಗೆ ತೆರಳಿ ಪರಿಶೀಲನೆ ನಡೆಸಿದ್ದು, ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವ ಉದ್ದೇಶವಿದೆ ಎಂದು ಹೇಳಿದರು.

ಶಿವಮೊಗ್ಗ ಹಾಗೂ ಬೆಂಗಳೂರಿನಲ್ಲಿ ಕೂಡ ಕಂಬಳ ಆಯೋಜನೆಗೆ ಅವಕಾಶ ಸಿಗುವ ಭರವಸೆ ಇದೆ. ಉತ್ತರ ಕನ್ನಡದಲ್ಲಿ ಕಂಬಳ ಆಯೋಜಿಸಲು ಸಚಿವ ಮಂಕಾಳ ವೈದ್ಯ ಉತ್ಸಾಹ ತೋರಿಸಿದ್ದಾರೆ. ಅಲ್ಲದೇ ಕಂಬಳದಲ್ಲಿ ತೊಡಗಿಸಿಕೊಂಡವರಿಗೆ ಕಾರ್ಮಿಕ ಕಾರ್ಡ್‌ ನೀಡುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

4 mins ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

50 mins ago

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

1 hour ago

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

2 hours ago

ಮುಸ್ಲಿಂ ನಂಬಿಕೆ; ಕಾಂಗ್ರೆಸ್‌ಗೆ ಬೇಕು ಹೊಣೆಗಾರಿಕೆ

ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ

ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…

3 hours ago