ರಾಜ್ಯ

ಕನಕಪುರ: ಸ್ಕೂಟರ್‌ಗೆ KSRTC ಬಸ್‌ ಡಿಕ್ಕಿ; ಇಬ್ಬರು ಮಕ್ಕಳ ಸಾವು

ರಾಮನಗರ: ಇಲ್ಲಿನ ಕನಕಪುರ-ರಾಮನಗರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಸ್ಕೂಟರ್‌ಗೆ ಡಿಕ್ಕಿ ಆಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಒಬ್ಬರು ಸ್ಥಿತಿ ಗಂಭೀರವಾಗಿದೆ. ಪ್ರದೀಪ್(‌5) ಮತ್ತು ಭವ್ಯ(3)ಮೃತ ಮಕ್ಕಳು. ಇಬ್ಬರೂ ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಬೈರಪ್ಪ ಅವರ ಮಕ್ಕಳು.

ಭೈರಪ್ಪ ಅವರು ತಮ್ಮ ಮಕ್ಕಳನ್ನು ಅಚ್ಚಲು ಕಾಲೋನಿಯ ಸಂಬಂಧಿ ಗೋವಿಂದ ಅವರ ಮನೆಗೆ ಕಳುಹಿಸಿದ್ದು, ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಗೋವಿಂದ ಅವರು ಬೆಳಿಗ್ಗೆ 9 ಗಂಟೆ ಮಕ್ಕಳು ಹಾಗೂ ಸ್ನೇಹಿತ ಮಧು ಅವರನ್ನು ಕರೆದುಕೊಂಡು ತಮ್ಮ ಸ್ಕೂಟರ್‌ನಲ್ಲಿ ಫಾರಂಗೆ ಹೋಗುವಾಗ ಮಾರ್ಗಮಧ್ಯೆ ಗ್ರಾಮದ ತಿರುವಿನಲ್ಲಿ ವೇಗವಾಗಿ ಬಂದ ಬಸ್‌ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮುಂಭಾಗದಲ್ಲಿ ಕುಳಿತಿದ್ದ ಮಕ್ಕಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮಧು ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಗೋವಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಘಟನೆ ಸಂಬಂಧ ಬಸ್‌ ವಶಪಡಿಸಿಕೊಂಡಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

7 mins ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

39 mins ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

52 mins ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

1 hour ago

ಜಿಎಸ್‌ಟಿ, ಐಟಿ ಪಾವತಿದಾರರು ‘ಗ್ರಹಲಕ್ಷ್ಮಿʼಗೆ ಅರ್ಹರಲ್ಲ : ಸಚಿವೆ ಲಕ್ಷ್ಮಿ

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…

1 hour ago

ಸಾಮಾಜಿಕ ಜಾಲತಾಣ ಬಳಕೆಯಿಂದ ದುಷ್ಪರಿಣಾಮ : ಹರೆಯದವರ ಬಳಕೆ ನಿಷೇಧಕ್ಕೆ ಚಿಂತನೆ

ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…

2 hours ago