ರಾಜ್ಯ

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ್‌ರನ್ನು ನೋಡಲು ಬಂದ ಸ್ಟಾರ್‌ ದಂಪತಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ನಟಿ ರಕ್ಷಿತಾ ಪ್ರೇಮ್‌ ದಂಪತಿ ಭೇಟಿ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಒಟ್ಟು 17 ಆರೋಪಿಗಳು ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. 4 ಮಂದಿ ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದ್ದು, ಉಳಿದ 13 ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ.

ಇನ್ನು ನಟ ದರ್ಶನ್‌ ಜೈಲು ಸೇರಿದ ಬಳಿಕ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್‌ ಜೈಲಿಗೆ ಭೇಟಿ ಕೊಟ್ಟಿದ್ದರು. ಇದೀಗ ದರ್ಶನ್‌ರನ್ನು ನೋಡಲು ನಟಿ ರಕ್ಷಿತಾ ಪ್ರೇಮ್‌ ಹಾಗೂ ಪ್ರೇಮ್‌ ಇಬ್ಬರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ಕಾರಿನಲ್ಲಿಯೇ ಜೈಲಿನ ಆವರಣಕ್ಕೆ ಎಂಟ್ರಿಕೊಟ್ಟ ರಕ್ಷಿತಾ ಪ್ರೇಮ್‌ ಹಾಗೂ ಪ್ರೇಮ್‌ ಅವರು ಕೆಲ ಹೊತ್ತು ಕಾದು ಕುಳಿತು ಜೈಲಿನ ಒಳಗಡೆ ಹೋಗಿದ್ದಾರೆ.

ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಪವಿತ್ರಾಗೌಡೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಆತನನ್ನು ದರ್ಶನ್‌ ಅಂಡ್‌ ಗ್ಯಾಂಗ್‌ ಬಿಗ್‌ ಪ್ಲಾನ್‌ ಮಾಡಿ ಬೆಂಗಳೂರಿಗೆ ಕರೆಸಿಕೊಂಡಿದ್ದರು. ಬಳಿಕ ಆತನಿಗೆ ಚಿತ್ರಹಿಂಸೆ ಕೊಟ್ಟು ಬಹಲ ಕ್ರೂರವಾಗಿ ಕೊಲೆ ಮಾಡಿದ್ದರು.

ಬಳಿಕ ಜೂನ್.‌9ರಂದು ವಿಕೃತ ಸ್ಥಿತಿಯಲ್ಲಿ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು. ಕೊಲೆಯಾದ ಯುವಕ ರೇಣುಕಾಸ್ವಾಮಿ ಅವರ ಮುಖದ ಮೂಳೆ ಮುರಿದಿತ್ತು. ಮೂಗು ಓಪನ್‌ ಆಗುವಂತೆ ಗುದ್ದಿದ್ದರು. ಕಾಲಿನಿಂದ ಮರ್ಮಾಂಗಕ್ಕೆ ಒದೆಯಲಾಗಿತ್ತು. ಎಡಭಾಗದ ಪಕ್ಕೆಲುಬು ಕಟ್‌ ಆಗುವಂತೆ ಹಲ್ಲೆ ಮಾಡಲಾಗಿತ್ತು. ರೇಣುಕಾಸ್ವಾಮಿ ಅವರ ಕಾಲು ಮತ್ತು ಕೈಗೆ ಬ್ಯಾಟ್‌ ಹಾಗೂ ದೊಣ್ಣೆಯಿಂದ ಹಲ್ಲೆ ಮಾಡಲಾಗಿತ್ತು. ಮೃತ ವ್ಯಕ್ತಿಯ ಕಿವಿ ಹಾಗೂ ತಲೆಗೆ ಗಂಭೀರ ಗಾಯ ಆಗಿತ್ತು. ಈ ಕೇಸನ್ನು ಕೈಗೆತ್ತಿಕೊಂಡಿದ್ದ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸಿ ಸಾಕ್ಷಿ ಸಮೇತ ಅಸಲಿ ವಿಚಾರವನ್ನು ಬೆಳಕಿಗೆ ತಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

4 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

4 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

6 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

9 hours ago