ಬೆಂಗಳೂರು: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಆಯೋಜಿಸಲಾಗುವುದು. ಹಾಗೂ ಕಾರ್ಯಕ್ರಮದ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು, ಮಂಡ್ಯದಲ್ಲಿ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳಿದ್ದು ಎಲ್ಲವನ್ನು ಬಗೆಹರಿಸಿ ಸಮ್ಮೇಳನ ನಡೆಸಲಾಗುವುದು ಎಂದರು.
ವಿಶ್ವ ಸಮ್ಮೇಳನ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಸಮ್ಮೇಳನ ನಡೆಸುವ ಬಗ್ಗೆ ನಮಗೂ ಕೂಡಾ ಹೆಚ್ಚಿನ ಆಸಕ್ತಿಯಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ಬೆಂಗಳೂರಿನ ವಿಧಾನಸೌಧ ಸಮ್ಮೇಳನದ ಸಭಾಂಗಣದಲ್ಲಿ ಶುಕ್ರವಾರ 14 ಅಕಾಡೆಮಿ ಮತ್ತು 4 ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಮತ್ತು ಸದಸ್ಯರ ಜತೆಯಲ್ಲಿ ಸಮಾಲೋಚನೆ ನಡೆಸಿದರು. ಬಳಿಕ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆ ಬಗ್ಗೆ ಪ್ರಾಧಿಕಾರ ಮತ್ತು ಅಕಾಡೆಮಿಗಳು ರಾಜೀಯಾಗದೇ ಕೆಲಸ ಮಾಡಬೇಕು ಎಂಬುದು ನಮ್ಮ ಆಶಯ. ಈ ಬಗ್ಗೆ ನೂತನಾಗಿ ನೇಮಕಗೊಂಡವರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದರು.
ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…
ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…