ರಾಜ್ಯ

ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು. ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಸರಾಯಿತು ಕರ್ನಾಟಕ ಉಸಿರಾಯಿತುಕನ್ನಡ, ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ತುಂಬಿದ ಸಂದರ್ಭದಲ್ಲಿ ಕನ್ನಡಿಗರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದರು.

ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲಿ ಚೂಡಾಮಣಿ ಆಗು, ಕನ್ನಡ ಜ್ಯೋತಿ ಬೆಳಗು ಜಗಕೆಲ್ಲ ಎಂಬ ಕವಿವಾಣಿಯನ್ನು ಸ್ಮರಿಸಿಕೊಂಡ ಅವರು, ಕನ್ನಡ.. ಕನ್ನಡಿಗ..ಕರ್ನಾಟಕ… ಈ ಮೂರಕ್ಕೂ ನವೆಂಬರ್ 1 ಕ್ಕೂ ಬಿಡಿಸಲಾರದ ನಂಟು. ಆದರೆ ಕನ್ನಡದ ಅಭಿಮಾನ ಬರೀ ನವೆಂಬರ್ 1 ಕ್ಕೆ ಸೀಮಿತ ಆಗದಿರಲಿ. ಕನ್ನಡ ಹೃದಯದ ಭಾಷೆಯಾಗಲಿ, ಕನ್ನಡ ಮನಸ್ಸಿನ ಭಾಷೆಯಾಗಲಿ ಎಂದರು.

ಅನೇಕ ಹಿರಿಯರು ಕನ್ನಡದ ಬಗ್ಗೆ ವಿವಿಧ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಅಂಕುಶದಿಂದ ಚುಚ್ಚಿದರೂ ನಾನು ಹುಟ್ಟಿದ ಊರನ್ನು ಮರೆಯುವುದಿಲ್ಲ ಎಂದು ಪಂಪ ಹೇಳಿದ್ದಾರೆ. ಕುರಾನಿನಲ್ಲಿ ಹೇಳುತ್ತಾರೆ, ಸ್ವರ್ಗವು ತಂದೆ-ತಾಯಿಯ ಪಾದದ ಕೆಳಗೆ ಇದೆ ಎಂದು. ಅಂದರೆ ತಂದೆ-ತಾಯಿ ಸ್ಪರ್ಶಿಸಿದ ನೆಲವೇ ಸ್ವರ್ಗ ಎಂದು. ನಮಗೆ ಆ ಸ್ವರ್ಗ ಕರ್ನಾಟಕ. ತುಂಗಾ, ಭದ್ರಾ, ಕೃಷ್ಣ, ಕಾವೇರಿ ಹರಿಯುವ ಈ ತಾಯಿ ನೆಲವೇ ನಮಗೆ ಸ್ವರ್ಗ ಎಂದರು.

ನಾವು ಕೋಮು ದ್ವೇಷಕ್ಕೆ ಸಿಲುಕದೆ, ಕರ್ನಾಟಕದ ಮನಸ್ಸುಗಳನ್ನು ಒಡೆಯದೇ ಯಾವ ಹೊರಗಿನ ಶಕ್ತಿಗೂ ಹೆದರದೆ ಒಂದಾಗಿ ಬದುಕುತ್ತೇವೆ. ಸರ್ವಜನಾಂಗದ ಶಾಂತಿಯ ತೋಟ ಮರಳಿ ನಿರ್ಮಿಸುತ್ತೇವೆ ಎಂಬ ದೀಕ್ಷೆ ತೊಡೋಣ. ಬಹಳಷ್ಟು ಮಂದಿಯ ತ್ಯಾಗ ಮತ್ತು ಬಲಿದಾನದ ಫಲವೇ ಅಖಂಡ ಕರ್ನಾಟಕ. ಇದನ್ನು ಜೋಪಾನವಾಗಿ ಕಾಪಾಡಬೇಕು ಎಂದರು.

ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕರ್ನಾಟಕ ನೆಲ, ಜಲ, ಭಾಷೆಯಿಂದ ಸಂವೃದ್ಧಗೊಂಡಿದೆ. ವ್ಯಾಪಕ ಉದ್ಯೋಗ ಅವಕಾಶಗಳಿವೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಉಳಿದ ಅಗತ್ಯ ಇರುವ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಲಾಗುವುದು. 8311 ಹೊಸ ಕೊಠಡಿಗಳನ್ನು ಬಜೆಟ್‍ನಲ್ಲಿ ಘೋಷಿಸಲಾಗಿದೆ. 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 2024-25ನೇ ಸಾಲಿನಲ್ಲಿ 600 ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದರು.

ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಭಾರಿ ಪರೀಕ್ಷೆ ನಡೆಸಿ, ಸಾಧನೆ ಉತ್ತಮ ಪಡಿಸಲಾಗಿದೆ. ಅಪೌಷ್ಠಿಕತೆ ನಿವಾರಣೆಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಆಹಾರವಾಗಿ ಮೊಟ್ಟೆ, ಚಿಕ್ಕಿ, ಬಾಳೆ ಹಣ್ಣು ವಿತರಿಸಲಾಗುತ್ತಿದೆ. ಈ ವರ್ಷದಿಂದ 9 ಮತ್ತು 10ನೇ ತರಗತಿಯ ಮಕ್ಕಳಿಗೂ ಪೂರಕ ಆಹಾರ ನೀಡಲಾಗುತ್ತಿದೆ. ಸ್ವಯಂ ಸೇವಾ ಸಂಘಗಳ ಸಹಯೋಗದಲ್ಲಿ ಹಾಲಿನೊಂದಿಗೆ ಹೆಚ್ಚಿನ ಪೆÇ?ಷಕಾಂಶಗಳನ್ನು ನೀಡಲು ಈ ತಿಂಗಳಿನಿಂದಲೇ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದರು.

ಶಾಸಕ ರಿಜ್ಞಾನ್ ಅರ್ಷದ್ ಮಾತನಾಡಿ, ಕನ್ನಡ ನಾಡಿಗೆ ಅಧಿಕೃತವಾದ ಧ್ವಜ ಬೇಕಿದೆ. ಆರು ವರ್ಷದ ಹಿಂದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಡಿರುವ ಶಿಫಾರಸ್ಸನ್ನು ಆಧರಿಸಿ ನಾಡಿನ ಧ್ವಜಕ್ಕೆ ಮಾನ್ಯತೆ ದೊರೆಯಬೇಕು ಎಂದು ಒತ್ತಾಯ ಮಾಡಿದರು.

andolanait

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

7 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

8 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

9 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

9 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

9 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

10 hours ago