ರಾಜ್ಯ

ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು. ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಸರಾಯಿತು ಕರ್ನಾಟಕ ಉಸಿರಾಯಿತುಕನ್ನಡ, ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ತುಂಬಿದ ಸಂದರ್ಭದಲ್ಲಿ ಕನ್ನಡಿಗರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದರು.

ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲಿ ಚೂಡಾಮಣಿ ಆಗು, ಕನ್ನಡ ಜ್ಯೋತಿ ಬೆಳಗು ಜಗಕೆಲ್ಲ ಎಂಬ ಕವಿವಾಣಿಯನ್ನು ಸ್ಮರಿಸಿಕೊಂಡ ಅವರು, ಕನ್ನಡ.. ಕನ್ನಡಿಗ..ಕರ್ನಾಟಕ… ಈ ಮೂರಕ್ಕೂ ನವೆಂಬರ್ 1 ಕ್ಕೂ ಬಿಡಿಸಲಾರದ ನಂಟು. ಆದರೆ ಕನ್ನಡದ ಅಭಿಮಾನ ಬರೀ ನವೆಂಬರ್ 1 ಕ್ಕೆ ಸೀಮಿತ ಆಗದಿರಲಿ. ಕನ್ನಡ ಹೃದಯದ ಭಾಷೆಯಾಗಲಿ, ಕನ್ನಡ ಮನಸ್ಸಿನ ಭಾಷೆಯಾಗಲಿ ಎಂದರು.

ಅನೇಕ ಹಿರಿಯರು ಕನ್ನಡದ ಬಗ್ಗೆ ವಿವಿಧ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಅಂಕುಶದಿಂದ ಚುಚ್ಚಿದರೂ ನಾನು ಹುಟ್ಟಿದ ಊರನ್ನು ಮರೆಯುವುದಿಲ್ಲ ಎಂದು ಪಂಪ ಹೇಳಿದ್ದಾರೆ. ಕುರಾನಿನಲ್ಲಿ ಹೇಳುತ್ತಾರೆ, ಸ್ವರ್ಗವು ತಂದೆ-ತಾಯಿಯ ಪಾದದ ಕೆಳಗೆ ಇದೆ ಎಂದು. ಅಂದರೆ ತಂದೆ-ತಾಯಿ ಸ್ಪರ್ಶಿಸಿದ ನೆಲವೇ ಸ್ವರ್ಗ ಎಂದು. ನಮಗೆ ಆ ಸ್ವರ್ಗ ಕರ್ನಾಟಕ. ತುಂಗಾ, ಭದ್ರಾ, ಕೃಷ್ಣ, ಕಾವೇರಿ ಹರಿಯುವ ಈ ತಾಯಿ ನೆಲವೇ ನಮಗೆ ಸ್ವರ್ಗ ಎಂದರು.

ನಾವು ಕೋಮು ದ್ವೇಷಕ್ಕೆ ಸಿಲುಕದೆ, ಕರ್ನಾಟಕದ ಮನಸ್ಸುಗಳನ್ನು ಒಡೆಯದೇ ಯಾವ ಹೊರಗಿನ ಶಕ್ತಿಗೂ ಹೆದರದೆ ಒಂದಾಗಿ ಬದುಕುತ್ತೇವೆ. ಸರ್ವಜನಾಂಗದ ಶಾಂತಿಯ ತೋಟ ಮರಳಿ ನಿರ್ಮಿಸುತ್ತೇವೆ ಎಂಬ ದೀಕ್ಷೆ ತೊಡೋಣ. ಬಹಳಷ್ಟು ಮಂದಿಯ ತ್ಯಾಗ ಮತ್ತು ಬಲಿದಾನದ ಫಲವೇ ಅಖಂಡ ಕರ್ನಾಟಕ. ಇದನ್ನು ಜೋಪಾನವಾಗಿ ಕಾಪಾಡಬೇಕು ಎಂದರು.

ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕರ್ನಾಟಕ ನೆಲ, ಜಲ, ಭಾಷೆಯಿಂದ ಸಂವೃದ್ಧಗೊಂಡಿದೆ. ವ್ಯಾಪಕ ಉದ್ಯೋಗ ಅವಕಾಶಗಳಿವೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಉಳಿದ ಅಗತ್ಯ ಇರುವ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಲಾಗುವುದು. 8311 ಹೊಸ ಕೊಠಡಿಗಳನ್ನು ಬಜೆಟ್‍ನಲ್ಲಿ ಘೋಷಿಸಲಾಗಿದೆ. 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 2024-25ನೇ ಸಾಲಿನಲ್ಲಿ 600 ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದರು.

ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಭಾರಿ ಪರೀಕ್ಷೆ ನಡೆಸಿ, ಸಾಧನೆ ಉತ್ತಮ ಪಡಿಸಲಾಗಿದೆ. ಅಪೌಷ್ಠಿಕತೆ ನಿವಾರಣೆಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಆಹಾರವಾಗಿ ಮೊಟ್ಟೆ, ಚಿಕ್ಕಿ, ಬಾಳೆ ಹಣ್ಣು ವಿತರಿಸಲಾಗುತ್ತಿದೆ. ಈ ವರ್ಷದಿಂದ 9 ಮತ್ತು 10ನೇ ತರಗತಿಯ ಮಕ್ಕಳಿಗೂ ಪೂರಕ ಆಹಾರ ನೀಡಲಾಗುತ್ತಿದೆ. ಸ್ವಯಂ ಸೇವಾ ಸಂಘಗಳ ಸಹಯೋಗದಲ್ಲಿ ಹಾಲಿನೊಂದಿಗೆ ಹೆಚ್ಚಿನ ಪೆÇ?ಷಕಾಂಶಗಳನ್ನು ನೀಡಲು ಈ ತಿಂಗಳಿನಿಂದಲೇ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದರು.

ಶಾಸಕ ರಿಜ್ಞಾನ್ ಅರ್ಷದ್ ಮಾತನಾಡಿ, ಕನ್ನಡ ನಾಡಿಗೆ ಅಧಿಕೃತವಾದ ಧ್ವಜ ಬೇಕಿದೆ. ಆರು ವರ್ಷದ ಹಿಂದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಡಿರುವ ಶಿಫಾರಸ್ಸನ್ನು ಆಧರಿಸಿ ನಾಡಿನ ಧ್ವಜಕ್ಕೆ ಮಾನ್ಯತೆ ದೊರೆಯಬೇಕು ಎಂದು ಒತ್ತಾಯ ಮಾಡಿದರು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago