ರಾಜ್ಯ

ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು. ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಸರಾಯಿತು ಕರ್ನಾಟಕ ಉಸಿರಾಯಿತುಕನ್ನಡ, ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ತುಂಬಿದ ಸಂದರ್ಭದಲ್ಲಿ ಕನ್ನಡಿಗರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದರು.

ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲಿ ಚೂಡಾಮಣಿ ಆಗು, ಕನ್ನಡ ಜ್ಯೋತಿ ಬೆಳಗು ಜಗಕೆಲ್ಲ ಎಂಬ ಕವಿವಾಣಿಯನ್ನು ಸ್ಮರಿಸಿಕೊಂಡ ಅವರು, ಕನ್ನಡ.. ಕನ್ನಡಿಗ..ಕರ್ನಾಟಕ… ಈ ಮೂರಕ್ಕೂ ನವೆಂಬರ್ 1 ಕ್ಕೂ ಬಿಡಿಸಲಾರದ ನಂಟು. ಆದರೆ ಕನ್ನಡದ ಅಭಿಮಾನ ಬರೀ ನವೆಂಬರ್ 1 ಕ್ಕೆ ಸೀಮಿತ ಆಗದಿರಲಿ. ಕನ್ನಡ ಹೃದಯದ ಭಾಷೆಯಾಗಲಿ, ಕನ್ನಡ ಮನಸ್ಸಿನ ಭಾಷೆಯಾಗಲಿ ಎಂದರು.

ಅನೇಕ ಹಿರಿಯರು ಕನ್ನಡದ ಬಗ್ಗೆ ವಿವಿಧ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಅಂಕುಶದಿಂದ ಚುಚ್ಚಿದರೂ ನಾನು ಹುಟ್ಟಿದ ಊರನ್ನು ಮರೆಯುವುದಿಲ್ಲ ಎಂದು ಪಂಪ ಹೇಳಿದ್ದಾರೆ. ಕುರಾನಿನಲ್ಲಿ ಹೇಳುತ್ತಾರೆ, ಸ್ವರ್ಗವು ತಂದೆ-ತಾಯಿಯ ಪಾದದ ಕೆಳಗೆ ಇದೆ ಎಂದು. ಅಂದರೆ ತಂದೆ-ತಾಯಿ ಸ್ಪರ್ಶಿಸಿದ ನೆಲವೇ ಸ್ವರ್ಗ ಎಂದು. ನಮಗೆ ಆ ಸ್ವರ್ಗ ಕರ್ನಾಟಕ. ತುಂಗಾ, ಭದ್ರಾ, ಕೃಷ್ಣ, ಕಾವೇರಿ ಹರಿಯುವ ಈ ತಾಯಿ ನೆಲವೇ ನಮಗೆ ಸ್ವರ್ಗ ಎಂದರು.

ನಾವು ಕೋಮು ದ್ವೇಷಕ್ಕೆ ಸಿಲುಕದೆ, ಕರ್ನಾಟಕದ ಮನಸ್ಸುಗಳನ್ನು ಒಡೆಯದೇ ಯಾವ ಹೊರಗಿನ ಶಕ್ತಿಗೂ ಹೆದರದೆ ಒಂದಾಗಿ ಬದುಕುತ್ತೇವೆ. ಸರ್ವಜನಾಂಗದ ಶಾಂತಿಯ ತೋಟ ಮರಳಿ ನಿರ್ಮಿಸುತ್ತೇವೆ ಎಂಬ ದೀಕ್ಷೆ ತೊಡೋಣ. ಬಹಳಷ್ಟು ಮಂದಿಯ ತ್ಯಾಗ ಮತ್ತು ಬಲಿದಾನದ ಫಲವೇ ಅಖಂಡ ಕರ್ನಾಟಕ. ಇದನ್ನು ಜೋಪಾನವಾಗಿ ಕಾಪಾಡಬೇಕು ಎಂದರು.

ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕರ್ನಾಟಕ ನೆಲ, ಜಲ, ಭಾಷೆಯಿಂದ ಸಂವೃದ್ಧಗೊಂಡಿದೆ. ವ್ಯಾಪಕ ಉದ್ಯೋಗ ಅವಕಾಶಗಳಿವೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಉಳಿದ ಅಗತ್ಯ ಇರುವ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಲಾಗುವುದು. 8311 ಹೊಸ ಕೊಠಡಿಗಳನ್ನು ಬಜೆಟ್‍ನಲ್ಲಿ ಘೋಷಿಸಲಾಗಿದೆ. 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 2024-25ನೇ ಸಾಲಿನಲ್ಲಿ 600 ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದರು.

ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಭಾರಿ ಪರೀಕ್ಷೆ ನಡೆಸಿ, ಸಾಧನೆ ಉತ್ತಮ ಪಡಿಸಲಾಗಿದೆ. ಅಪೌಷ್ಠಿಕತೆ ನಿವಾರಣೆಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಆಹಾರವಾಗಿ ಮೊಟ್ಟೆ, ಚಿಕ್ಕಿ, ಬಾಳೆ ಹಣ್ಣು ವಿತರಿಸಲಾಗುತ್ತಿದೆ. ಈ ವರ್ಷದಿಂದ 9 ಮತ್ತು 10ನೇ ತರಗತಿಯ ಮಕ್ಕಳಿಗೂ ಪೂರಕ ಆಹಾರ ನೀಡಲಾಗುತ್ತಿದೆ. ಸ್ವಯಂ ಸೇವಾ ಸಂಘಗಳ ಸಹಯೋಗದಲ್ಲಿ ಹಾಲಿನೊಂದಿಗೆ ಹೆಚ್ಚಿನ ಪೆÇ?ಷಕಾಂಶಗಳನ್ನು ನೀಡಲು ಈ ತಿಂಗಳಿನಿಂದಲೇ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದರು.

ಶಾಸಕ ರಿಜ್ಞಾನ್ ಅರ್ಷದ್ ಮಾತನಾಡಿ, ಕನ್ನಡ ನಾಡಿಗೆ ಅಧಿಕೃತವಾದ ಧ್ವಜ ಬೇಕಿದೆ. ಆರು ವರ್ಷದ ಹಿಂದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಡಿರುವ ಶಿಫಾರಸ್ಸನ್ನು ಆಧರಿಸಿ ನಾಡಿನ ಧ್ವಜಕ್ಕೆ ಮಾನ್ಯತೆ ದೊರೆಯಬೇಕು ಎಂದು ಒತ್ತಾಯ ಮಾಡಿದರು.

andolanait

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

49 mins ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

55 mins ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

59 mins ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

60 mins ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

1 hour ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

1 hour ago