ರಾಜ್ಯ

ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು. ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಸರಾಯಿತು ಕರ್ನಾಟಕ ಉಸಿರಾಯಿತುಕನ್ನಡ, ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ತುಂಬಿದ ಸಂದರ್ಭದಲ್ಲಿ ಕನ್ನಡಿಗರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದರು.

ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲಿ ಚೂಡಾಮಣಿ ಆಗು, ಕನ್ನಡ ಜ್ಯೋತಿ ಬೆಳಗು ಜಗಕೆಲ್ಲ ಎಂಬ ಕವಿವಾಣಿಯನ್ನು ಸ್ಮರಿಸಿಕೊಂಡ ಅವರು, ಕನ್ನಡ.. ಕನ್ನಡಿಗ..ಕರ್ನಾಟಕ… ಈ ಮೂರಕ್ಕೂ ನವೆಂಬರ್ 1 ಕ್ಕೂ ಬಿಡಿಸಲಾರದ ನಂಟು. ಆದರೆ ಕನ್ನಡದ ಅಭಿಮಾನ ಬರೀ ನವೆಂಬರ್ 1 ಕ್ಕೆ ಸೀಮಿತ ಆಗದಿರಲಿ. ಕನ್ನಡ ಹೃದಯದ ಭಾಷೆಯಾಗಲಿ, ಕನ್ನಡ ಮನಸ್ಸಿನ ಭಾಷೆಯಾಗಲಿ ಎಂದರು.

ಅನೇಕ ಹಿರಿಯರು ಕನ್ನಡದ ಬಗ್ಗೆ ವಿವಿಧ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಅಂಕುಶದಿಂದ ಚುಚ್ಚಿದರೂ ನಾನು ಹುಟ್ಟಿದ ಊರನ್ನು ಮರೆಯುವುದಿಲ್ಲ ಎಂದು ಪಂಪ ಹೇಳಿದ್ದಾರೆ. ಕುರಾನಿನಲ್ಲಿ ಹೇಳುತ್ತಾರೆ, ಸ್ವರ್ಗವು ತಂದೆ-ತಾಯಿಯ ಪಾದದ ಕೆಳಗೆ ಇದೆ ಎಂದು. ಅಂದರೆ ತಂದೆ-ತಾಯಿ ಸ್ಪರ್ಶಿಸಿದ ನೆಲವೇ ಸ್ವರ್ಗ ಎಂದು. ನಮಗೆ ಆ ಸ್ವರ್ಗ ಕರ್ನಾಟಕ. ತುಂಗಾ, ಭದ್ರಾ, ಕೃಷ್ಣ, ಕಾವೇರಿ ಹರಿಯುವ ಈ ತಾಯಿ ನೆಲವೇ ನಮಗೆ ಸ್ವರ್ಗ ಎಂದರು.

ನಾವು ಕೋಮು ದ್ವೇಷಕ್ಕೆ ಸಿಲುಕದೆ, ಕರ್ನಾಟಕದ ಮನಸ್ಸುಗಳನ್ನು ಒಡೆಯದೇ ಯಾವ ಹೊರಗಿನ ಶಕ್ತಿಗೂ ಹೆದರದೆ ಒಂದಾಗಿ ಬದುಕುತ್ತೇವೆ. ಸರ್ವಜನಾಂಗದ ಶಾಂತಿಯ ತೋಟ ಮರಳಿ ನಿರ್ಮಿಸುತ್ತೇವೆ ಎಂಬ ದೀಕ್ಷೆ ತೊಡೋಣ. ಬಹಳಷ್ಟು ಮಂದಿಯ ತ್ಯಾಗ ಮತ್ತು ಬಲಿದಾನದ ಫಲವೇ ಅಖಂಡ ಕರ್ನಾಟಕ. ಇದನ್ನು ಜೋಪಾನವಾಗಿ ಕಾಪಾಡಬೇಕು ಎಂದರು.

ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕರ್ನಾಟಕ ನೆಲ, ಜಲ, ಭಾಷೆಯಿಂದ ಸಂವೃದ್ಧಗೊಂಡಿದೆ. ವ್ಯಾಪಕ ಉದ್ಯೋಗ ಅವಕಾಶಗಳಿವೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಉಳಿದ ಅಗತ್ಯ ಇರುವ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಲಾಗುವುದು. 8311 ಹೊಸ ಕೊಠಡಿಗಳನ್ನು ಬಜೆಟ್‍ನಲ್ಲಿ ಘೋಷಿಸಲಾಗಿದೆ. 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 2024-25ನೇ ಸಾಲಿನಲ್ಲಿ 600 ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದರು.

ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಭಾರಿ ಪರೀಕ್ಷೆ ನಡೆಸಿ, ಸಾಧನೆ ಉತ್ತಮ ಪಡಿಸಲಾಗಿದೆ. ಅಪೌಷ್ಠಿಕತೆ ನಿವಾರಣೆಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಆಹಾರವಾಗಿ ಮೊಟ್ಟೆ, ಚಿಕ್ಕಿ, ಬಾಳೆ ಹಣ್ಣು ವಿತರಿಸಲಾಗುತ್ತಿದೆ. ಈ ವರ್ಷದಿಂದ 9 ಮತ್ತು 10ನೇ ತರಗತಿಯ ಮಕ್ಕಳಿಗೂ ಪೂರಕ ಆಹಾರ ನೀಡಲಾಗುತ್ತಿದೆ. ಸ್ವಯಂ ಸೇವಾ ಸಂಘಗಳ ಸಹಯೋಗದಲ್ಲಿ ಹಾಲಿನೊಂದಿಗೆ ಹೆಚ್ಚಿನ ಪೆÇ?ಷಕಾಂಶಗಳನ್ನು ನೀಡಲು ಈ ತಿಂಗಳಿನಿಂದಲೇ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದರು.

ಶಾಸಕ ರಿಜ್ಞಾನ್ ಅರ್ಷದ್ ಮಾತನಾಡಿ, ಕನ್ನಡ ನಾಡಿಗೆ ಅಧಿಕೃತವಾದ ಧ್ವಜ ಬೇಕಿದೆ. ಆರು ವರ್ಷದ ಹಿಂದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಡಿರುವ ಶಿಫಾರಸ್ಸನ್ನು ಆಧರಿಸಿ ನಾಡಿನ ಧ್ವಜಕ್ಕೆ ಮಾನ್ಯತೆ ದೊರೆಯಬೇಕು ಎಂದು ಒತ್ತಾಯ ಮಾಡಿದರು.

andolanait

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

9 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

10 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

11 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

11 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

12 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

12 hours ago