ರಾಜ್ಯ

ನೆರೆ ರಾಜ್ಯಗಳ ವಿ.ವಿಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ : 25 ಸಾ.ರೂ. ವಿದ್ಯಾರ್ಥಿ ವೇತನ

ಬೆಂಗಳೂರು : ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು ೧೦೨ ವಿದ್ಯಾರ್ಥಿಗಳಿಗೆ ತಲಾ ೨೫ ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಅನುದಾನ ಕೊರತೆಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಿದ್ದು, ಈ ಬಾರಿಯ ಕೊರತೆ ಅನುದಾನದ ನಡುವೆಯೂ ಈ ವಿಶ್ವವಿದ್ಯಾಲಯಗಳಲ್ಲಿ ೨೦೨೪-೨೫ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿದ್ಯಾರ್ಥಿವೇತನ ಮಂಜೂರಾತಿಗೆ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ೨೧ ವಿದ್ಯಾರ್ಥಿಗಳು, ಕಾಸರಗೋಡಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ೨೭ ವಿದ್ಯಾರ್ಥಿಗಳು, ಮಹಾರಾಷ್ಟ್ರದ ಸೊಲ್ಲಾಪುರದ ಪುಣ್ಯಶ್ಲೋಕ ಅಹಿಲ್ಯಾದೇವಿ ಹೊಳ್ಕರ ವಿಶ್ವವಿದ್ಯಾಲಯದ ೨೫ ವಿದ್ಯಾರ್ಥಿಗಳು, ಸೊಲ್ಲಾಪುರದ ಸಿಬಿ ಖೇಡಗಿ ಬಸವೇಶ್ವರ ಮಹಾವಿದ್ಯಾಲಯದ ೨೩ ವಿದ್ಯಾರ್ಥಿಗಳು, ಮುಂಬೈ ವಿಶ್ವವಿದ್ಯಾಲಯದ ಇಬ್ಬರು, ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಮೂರು ವಿದ್ಯಾರ್ಥಿಗಳು ಹಾಗೂ ಚನ್ನೈನ ಮದ್ರಾಸು ವಿಶ್ವವಿದ್ಯಾಲಯದ ಒಬ್ಬ ವಿದ್ಯಾರ್ಥಿಗೆ ಒಟ್ಟಾರೆ ೧೦೨ ವಿದ್ಯಾರ್ಥಿಗಳಿಗೆ ತಲಾ ರೂ. ೨೫ ಸಾವಿರದಂತೆ ಒಟ್ಟು ರೂ. ಇಪ್ಪತ್ತೈದು ಲಕ್ಷ ಐವತ್ತು ಸಾವಿರ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದಿರುವ ಬಿಳಿಮಲೆ, ಇದೇ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣವನ್ನು ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೂಡಲೇ ರಾಜ್ಯ ಸರ್ಕಾರವು ಹೊರ ನಾಡಿನ ಎಂ.ಎ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾರ್ಥಿವೇತನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಗೆ ಈ ವಿಶ್ವವಿದ್ಯಾಲಯಗಳ ಕನ್ನಡ ವಿಭಾಗಗಳನ್ನು ಸಬಲೀಕರಣಗೊಳಿಸಲು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

5 mins ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

2 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

2 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

7 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

12 hours ago