ರಾಜ್ಯ

ನೆರೆ ರಾಜ್ಯಗಳ ವಿ.ವಿಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ : 25 ಸಾ.ರೂ. ವಿದ್ಯಾರ್ಥಿ ವೇತನ

ಬೆಂಗಳೂರು : ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು ೧೦೨ ವಿದ್ಯಾರ್ಥಿಗಳಿಗೆ ತಲಾ ೨೫ ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಅನುದಾನ ಕೊರತೆಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಿದ್ದು, ಈ ಬಾರಿಯ ಕೊರತೆ ಅನುದಾನದ ನಡುವೆಯೂ ಈ ವಿಶ್ವವಿದ್ಯಾಲಯಗಳಲ್ಲಿ ೨೦೨೪-೨೫ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿದ್ಯಾರ್ಥಿವೇತನ ಮಂಜೂರಾತಿಗೆ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ೨೧ ವಿದ್ಯಾರ್ಥಿಗಳು, ಕಾಸರಗೋಡಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ೨೭ ವಿದ್ಯಾರ್ಥಿಗಳು, ಮಹಾರಾಷ್ಟ್ರದ ಸೊಲ್ಲಾಪುರದ ಪುಣ್ಯಶ್ಲೋಕ ಅಹಿಲ್ಯಾದೇವಿ ಹೊಳ್ಕರ ವಿಶ್ವವಿದ್ಯಾಲಯದ ೨೫ ವಿದ್ಯಾರ್ಥಿಗಳು, ಸೊಲ್ಲಾಪುರದ ಸಿಬಿ ಖೇಡಗಿ ಬಸವೇಶ್ವರ ಮಹಾವಿದ್ಯಾಲಯದ ೨೩ ವಿದ್ಯಾರ್ಥಿಗಳು, ಮುಂಬೈ ವಿಶ್ವವಿದ್ಯಾಲಯದ ಇಬ್ಬರು, ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಮೂರು ವಿದ್ಯಾರ್ಥಿಗಳು ಹಾಗೂ ಚನ್ನೈನ ಮದ್ರಾಸು ವಿಶ್ವವಿದ್ಯಾಲಯದ ಒಬ್ಬ ವಿದ್ಯಾರ್ಥಿಗೆ ಒಟ್ಟಾರೆ ೧೦೨ ವಿದ್ಯಾರ್ಥಿಗಳಿಗೆ ತಲಾ ರೂ. ೨೫ ಸಾವಿರದಂತೆ ಒಟ್ಟು ರೂ. ಇಪ್ಪತ್ತೈದು ಲಕ್ಷ ಐವತ್ತು ಸಾವಿರ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದಿರುವ ಬಿಳಿಮಲೆ, ಇದೇ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣವನ್ನು ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೂಡಲೇ ರಾಜ್ಯ ಸರ್ಕಾರವು ಹೊರ ನಾಡಿನ ಎಂ.ಎ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾರ್ಥಿವೇತನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಗೆ ಈ ವಿಶ್ವವಿದ್ಯಾಲಯಗಳ ಕನ್ನಡ ವಿಭಾಗಗಳನ್ನು ಸಬಲೀಕರಣಗೊಳಿಸಲು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

13 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

13 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

13 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

13 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago