ರಾಜ್ಯ

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಬೆಂಗಳೂರು: ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷದಂತೆ ಈ ಬಾರಿಯೂ ನೀಡುತ್ತಿದೆ. ಅದರಲ್ಲಿ 69 ಸಾಧಕರು ಈ ಪ್ರಶಸ್ತಿಗೆ ಭಾಜನಾರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. ಈ ಮಧ್ಯೆಯೇ ಸರ್ಕಾರ ಸಂಘ-ಸಂಸ್ಥೆಗಳು ಹಾಗೂ ವೈಯಕ್ತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ 69 ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಅಲ್ಲದೇ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 50 ಪುರುಷ ಹಾಗೂ 50 ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಘೋಷಿಸಿದೆ.

ಕಲೆ, ಸಾಹಿತ್ಯ, ಜಾನಪದ, ಕೃಷಿ-ಪರಿಸರ, ವಿಜ್ಞಾನ-ತಂತ್ರಜ್ಞಾನ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಅದರಲ್ಲಿ ಪ್ರಮುಖವಾಗಿ ಕೃಷಿ ಕ್ಷೇತ್ರಕ್ಕೆ ಚಾಮರಾಜನಗರದ ಪುಟ್ಟೀರಮ್ಮ ಅವರು ಆಯ್ಕೆಯಾಗಿದ್ದು, ರಂಗಭೂಮಿ ಕ್ಷೇತ್ರದಲ್ಲಿ ಮೈಸೂರಿನ ಡಿ.ರಾಮು, ಜನಾರ್ಧನ್‌ ಎಚ್‌.(ಜನ್ನಿ), ಶಿಲ್ಪಕಲೆ ಕ್ಷೇತ್ರದಿಂದ ಅರುಣ್‌ ಯೋಗಿರಾಜ್‌, ಶಿಕ್ಷಣ ಕ್ಷೇತ್ರದಲ್ಲಿ ಕೊಡಗಿನ ಡಾ.ಪದ್ಮಾಶೇಖರ್‌ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಇನ್ನು ಸಂಗೀತ ಕ್ಷೇತ್ರದಲ್ಲಿ ಮಂಡ್ಯದ ಪಿ.ರಾಜಗೋಪಾಲ್‌, ನೃತ್ಯ ಕ್ಷೇತ್ರದಲ್ಲಿ ಮೈಸೂರಿನ ವಿದುಷಿ ಲಲಿತಾ ರಾವ್‌, ವೈದ್ಯಕೀಯ ಕ್ಷೇತ್ರದಿಂದ ಮೈಸೂರು ನಾರಾಯಣ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

8 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

9 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

10 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

11 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

12 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

13 hours ago