ರಾಜ್ಯ

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್‍ನಲ್ಲಿ ಸ್ಪಷ್ಟಪಡಿಸಿದರು.

ಸದಸ್ಯ ಚಿದಾನಂದ ಎಂ.ಗೌಡ ಹಾಗೂ ಉಮಾಶ್ರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಡಿಮೆ ವಿದ್ಯಾರ್ಥಿಗಳ ಸಂಖ್ಯೆಯಿರುವ ಶಾಲೆಗಳನ್ನು ಸರ್ಕಾರ ಪಕ್ಕದ ಶಾಲೆಗಳಿಗೆ ವಿಲೀನಗೊಳಿಸುತ್ತದೆ ಇಲ್ಲವೇ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತದೆ. ಇದಕ್ಕೆ ಮಾಧ್ಯಮಗಳು ಕೂಡ ಪುಷ್ಟಿ ನೀಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಸರ್ಕಾರಿ ಶಾಲೆಗಳನ್ನು ಎಲ್ಲಿಯೂ ಮುಚ್ಚುತ್ತೇವೆ ಎಂದು ಇಲ್ಲವೇ ವಿಲೀನ ಮಾಡುತ್ತೇವೆ ಎಂದು ಹೇಳಿಲ್ಲ. ಅಗತ್ಯಬಿದ್ದರೆ ಸರ್ಕಾರಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಳ ಮಾಡುತ್ತೇವೆ. ಈ ಬಗ್ಗೆ ಎದ್ದಿರುವ ಗೊಂದಲಗಳು ಕೇವಲ ಊಹಾಪೋಹ ಎಂದು ಸ್ಪಷ್ಟಪಡಿಸಿದರು.

ಕೆಲವು ಕಡೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದರೂ ಆ ಶಾಲೆಗಳಿಗೆ ನಾವು ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ ಕೊಡುತ್ತಿದ್ದೇವೆ. ಇದನ್ನು ಎಲ್ಲಿಯಾದರೂ ನಿಲ್ಲಿಸಿದೆಯೇ? ಎಂದು ವಿರೋಧಪಕ್ಷದ ಸದಸ್ಯರನ್ನು ಪ್ರಶ್ನೆ ಮಾಡಿದರು.

ಇದನ್ನು ಓದಿ: ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ನಮ ರಕ್ತದ ಕಣಕಣದಲ್ಲೂ ಕನ್ನಡ ಇದೆ. ಕನ್ನಡದ ಬಗ್ಗೆ ನಮಗೆ ಬದ್ಧತೆ ಇದೆ. ಕಾಳಜಿಯೂ ಇದೆ. ಹಿಂದಿನ ಸರ್ಕಾರಗಳು ಸರ್ಕಾರಿ ಶಾಲೆಗಳನ್ನು ಯಾವ ದುಸ್ಥಿತಿಗೆ ತಂದಿದ್ದವು ಎಂದು ಹೇಳಲು ಹೋದರೆ ಬೇರೆ ಕತೆಯಾಗುತ್ತದೆ. ಅನುದಾನಿತ ಶಾಲೆಗಳಲ್ಲಿ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಕ ಮಾಡಿದ ಮೊಟ್ಟ ಮೊದಲ ಸರ್ಕಾರ ಎಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದಾಗ ಆಡಳಿತ ಪಕ್ಷದ ಸದಸ್ಯರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು.
ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಸರ್ಕಾರಿ ಶಾಲೆಗಳನ್ನು ಎಷ್ಟು ಮುಚ್ಚಿದೆ ಎಂದು ನಾನು ಸದನಕ್ಕೆ ಹೇಳಬೇಕಿದೆ. ಇಡೀ ದೇಶದಲ್ಲೆ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳು, ಗುಣಮಟ್ಟದ ಶಿಕ್ಷಣ, ಸೈಕಲ್ ವಿತರಣೆ ಸೇರಿದಂತೆ ಹಲವಾರು ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. ಸರ್ಕಾರಿ ಶಾಲೆಯನ್ನು ಎಲ್ಲಾದರೂ ಮುಚ್ಚಿದ್ದರೆ ದಾಖಲೆ ಸಮೇತ ಕೊಡಿ ಎಂದು ಮಧು ಬಂಗಾರಪ್ಪ ಸವಾಲು ಹಾಕಿದರು.

ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವುದಕ್ಕಾಗಿಯೇ ರಾಜ್ಯದ ಪ್ರತಿಯೊಂದು ತಾಲ್ಲೂಕಿನ ಹೋಬಳಿಯಲ್ಲಿ ಕೆಪಿಎಸ್ ತೆರೆಯಲಾಗಿದೆ. ನಾನು ಹೇಳದೇ ಇರುವ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಘೋಷಣೆ ಮಾಡಿದ್ದು 500 ಶಾಲೆ. ಈಗ 900 ಶಾಲೆಗಳನ್ನು ಪ್ರಾರಂಭಿಸಿದ್ದೇವೆ. ಇದು ನಮ ಸರ್ಕಾರದ ಬದ್ಧತೆ ಅಲ್ಲವೇ? ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

23 mins ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

39 mins ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

59 mins ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

2 hours ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

2 hours ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

3 hours ago