ರಾಜ್ಯ

ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪರಮೇಶ್ವರ್‌

ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್‌ ಭರವಸೆ ನೀಡಿದ್ದಾರೆ.

ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತ್ಯಾಮಗೊಂಡ್ಲುಗೆ ಭೇಟಿ ನೀಡಿ, ತಂದೆ ತಾಯಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ನೆಲಮಂಗಲ ಕ್ಷೇತ್ರದ ಮಾಜಿ ಶಾಸಕ ಡಾ.ಶ್ರೀನಿವಾಸ ಮೂರ್ತಿ ಚಂದನ್ ಕುಮಾರ್ ಮನೆಗೆ ಭೇಟಿ ನೀಡಿದ್ದರು. ಅಲ್ಲಿಂದಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿದ್ದರು. ಆ ವೇಳೆ ಚಂದನ್ ಅವರ ತಂದೆ ತಾಯಿ ಜೊತೆ ಮಾತನಾಡಿದ ಕುಮಾರಸ್ವಾಮಿಯವರು ಭಾರೀ ಅನ್ಯಾಯವಾಗಿ ಹೋಗಿದೆ ಎಂದು ವಿಷಾದಿಸಿದ್ದಾರೆ.

ತಾವು ರಾಯಭಾರ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಪಾರ್ಥಿವ ಶರೀರವನ್ನು ಆದಷ್ಟು ಶೀಘ್ರವಾಗಿ ತರಲು ಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಚಂದನ್ ಅವರ ತಂದೆ, ತಮ್ಮ ಪುತ್ರನನ್ನು ತಾಯ್ನಾಡಿನಲ್ಲೇ ಸಂಸ್ಕಾರ ಮಾಡಬೇಕು. ಮೃತದೇಹ ತರಲು ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ನನ್ನ ಮಗನಿಗೆ ಕೆನಡಾಗೆ ಹೋಗುವುದು ಬೇಡ. ಇಲ್ಲೆ? ಇರು ಎಂದು ಒತ್ತಾಯ ಮಾಡಿದ್ದೆ. ಮದುವೆಯಾಗುವಂತೆಯೂ ಹೇಳಿದ್ದೆ. ವಿದೇಶಕ್ಕೆ ಹೋಗುವ ಅವಕಾಶ ಸಿಕ್ಕಾಗ ಬಿಡಬಾರದು ಎಂದು ಹೇಳಿ ನನ್ನನ್ನೇ ಸಮಾಧಾನ ಮಾಡಿದ್ದ ಎಂದು ತಂದೆ ಕಣ್ಣೆರು ಹಾಕಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಭೇಟಿಯ ವೇಳೆ ತಾಯಿ ಶೈಲಜಾ, ತಮ್ಮ ಪುತ್ರನ ಪ್ರತಿಭೆಯ ಬಗ್ಗೆ ಗುಣಗಾನ ಮಾಡಿ ದುಃಖ ತೋಡಿಕೊಂಡಿದ್ದಾರೆ. ಅರೆಕಾಲಿಕ ಉದ್ಯೋಗ ಮಾಡಿಕೊಂಡು ಎಂಜಿನಿಯರಿಂಗ್ ಓದಿದ್ದ ಚಂದನ್, ಕ್ರೀಡೆ, ಓದು ಎಲ್ಲದರಲ್ಲೂ ಮುಂದಿದ್ದ. ಸ್ವಂತ ಪ್ರತಿಭೆಯ ಮೇಲೆ ಕೆನಡಾದಲ್ಲಿ ಉದ್ಯೋಗ ಗಿಟ್ಟಿಸಿದ್ದ. ನಮಗೆ ಯಾವ ಸಂದರ್ಭದಲ್ಲಿಯೂ ಒಂದಿಷ್ಟೂ ಕಷ್ಟ ಕೊಟ್ಟಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ನಾವು ಆತನ ಮೇಲೆ ಜೀವವನ್ನೇ ಇಟ್ಟುಕೊಂಡಿದ್ದೇವು. ಅವನಿಲ್ಲದ ಜೀವನ ನಮಗೆ ಕಲ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾವು ಇನ್ನೇಕೆ ಜೀವದಿಂದ ಇರಬೇಕು ಎಂಬ ನಿರಾಸೆ ಕಾಡುತ್ತಿದೆ ಎಂದಿದ್ದಾರೆ.

ತಮ್ಮ ಪುತ್ರನ ಪ್ರತಿಭೆ ಹಾಗೂ ಒಳ್ಳೆಯತನದ ಬಗ್ಗೆ ಹೊಗಳುವುದು ಇಷ್ಟವಾಗುತ್ತಿರಲಿಲ್ಲ. ನಾನು ಹೆಮೆಯಿಂದ ಯಾರ ಬಳಿಯಾದರೂ ಹೇಳಿಕೊಂಡರೆ, ಆ ರೀತಿ ಹೇಳಬೇಡ ಎಂದು ನನ್ನನ್ನೆ ಬಯ್ಯುತ್ತಿದ್ದ. ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ. ಕೆನಾಡಾಗೆ ಯಾರೇ ಬರುವುದಿದ್ದರೂ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದ ಎಂದು ಗೃಹ ಸಚಿವರಿಗೆ ವಿವರಿಸಿದ್ದಾರೆ.

ಕೆನಡಾದಲ್ಲಿ ಕನ್ನಡಾಭಿಮಾನ ಬಿತ್ತುವಲ್ಲಿ ಚಂದನ್ ಪಾತ್ರ ಪ್ರಮುಖವಾಗಿತ್ತು. ಕನ್ನಡ ಚಿತ್ರಗಳನ್ನು ಅಲ್ಲಿ ಬಿಡುಗಡೆ ಮಾಡಿಸಲು ಯತ್ನಿಸುತ್ತಿದ್ದರು ಎಂದು ಅವರ ಸ್ನೇಹಿತರು ಹೇಳಿದ್ದಾರೆ. ಸಚಿವ ಪರಮೇಶ್ವರ್, ಇದು ಆಗಬಾರದಿತ್ತು. ಧೈರ್ಯ ತಂದುಕೊಳ್ಳಿ. ನಾವು ನಿಮ್ಮ ಜೊತೆಗಿದ್ದೇವೆ ಎಂದು ಪೋಷಕರಿಗೆ ಧೈರ್ಯ ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago