ರಾಜ್ಯ

ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪರಮೇಶ್ವರ್‌

ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್‌ ಭರವಸೆ ನೀಡಿದ್ದಾರೆ.

ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತ್ಯಾಮಗೊಂಡ್ಲುಗೆ ಭೇಟಿ ನೀಡಿ, ತಂದೆ ತಾಯಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ನೆಲಮಂಗಲ ಕ್ಷೇತ್ರದ ಮಾಜಿ ಶಾಸಕ ಡಾ.ಶ್ರೀನಿವಾಸ ಮೂರ್ತಿ ಚಂದನ್ ಕುಮಾರ್ ಮನೆಗೆ ಭೇಟಿ ನೀಡಿದ್ದರು. ಅಲ್ಲಿಂದಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿದ್ದರು. ಆ ವೇಳೆ ಚಂದನ್ ಅವರ ತಂದೆ ತಾಯಿ ಜೊತೆ ಮಾತನಾಡಿದ ಕುಮಾರಸ್ವಾಮಿಯವರು ಭಾರೀ ಅನ್ಯಾಯವಾಗಿ ಹೋಗಿದೆ ಎಂದು ವಿಷಾದಿಸಿದ್ದಾರೆ.

ತಾವು ರಾಯಭಾರ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಪಾರ್ಥಿವ ಶರೀರವನ್ನು ಆದಷ್ಟು ಶೀಘ್ರವಾಗಿ ತರಲು ಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಚಂದನ್ ಅವರ ತಂದೆ, ತಮ್ಮ ಪುತ್ರನನ್ನು ತಾಯ್ನಾಡಿನಲ್ಲೇ ಸಂಸ್ಕಾರ ಮಾಡಬೇಕು. ಮೃತದೇಹ ತರಲು ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ನನ್ನ ಮಗನಿಗೆ ಕೆನಡಾಗೆ ಹೋಗುವುದು ಬೇಡ. ಇಲ್ಲೆ? ಇರು ಎಂದು ಒತ್ತಾಯ ಮಾಡಿದ್ದೆ. ಮದುವೆಯಾಗುವಂತೆಯೂ ಹೇಳಿದ್ದೆ. ವಿದೇಶಕ್ಕೆ ಹೋಗುವ ಅವಕಾಶ ಸಿಕ್ಕಾಗ ಬಿಡಬಾರದು ಎಂದು ಹೇಳಿ ನನ್ನನ್ನೇ ಸಮಾಧಾನ ಮಾಡಿದ್ದ ಎಂದು ತಂದೆ ಕಣ್ಣೆರು ಹಾಕಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಭೇಟಿಯ ವೇಳೆ ತಾಯಿ ಶೈಲಜಾ, ತಮ್ಮ ಪುತ್ರನ ಪ್ರತಿಭೆಯ ಬಗ್ಗೆ ಗುಣಗಾನ ಮಾಡಿ ದುಃಖ ತೋಡಿಕೊಂಡಿದ್ದಾರೆ. ಅರೆಕಾಲಿಕ ಉದ್ಯೋಗ ಮಾಡಿಕೊಂಡು ಎಂಜಿನಿಯರಿಂಗ್ ಓದಿದ್ದ ಚಂದನ್, ಕ್ರೀಡೆ, ಓದು ಎಲ್ಲದರಲ್ಲೂ ಮುಂದಿದ್ದ. ಸ್ವಂತ ಪ್ರತಿಭೆಯ ಮೇಲೆ ಕೆನಡಾದಲ್ಲಿ ಉದ್ಯೋಗ ಗಿಟ್ಟಿಸಿದ್ದ. ನಮಗೆ ಯಾವ ಸಂದರ್ಭದಲ್ಲಿಯೂ ಒಂದಿಷ್ಟೂ ಕಷ್ಟ ಕೊಟ್ಟಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ನಾವು ಆತನ ಮೇಲೆ ಜೀವವನ್ನೇ ಇಟ್ಟುಕೊಂಡಿದ್ದೇವು. ಅವನಿಲ್ಲದ ಜೀವನ ನಮಗೆ ಕಲ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾವು ಇನ್ನೇಕೆ ಜೀವದಿಂದ ಇರಬೇಕು ಎಂಬ ನಿರಾಸೆ ಕಾಡುತ್ತಿದೆ ಎಂದಿದ್ದಾರೆ.

ತಮ್ಮ ಪುತ್ರನ ಪ್ರತಿಭೆ ಹಾಗೂ ಒಳ್ಳೆಯತನದ ಬಗ್ಗೆ ಹೊಗಳುವುದು ಇಷ್ಟವಾಗುತ್ತಿರಲಿಲ್ಲ. ನಾನು ಹೆಮೆಯಿಂದ ಯಾರ ಬಳಿಯಾದರೂ ಹೇಳಿಕೊಂಡರೆ, ಆ ರೀತಿ ಹೇಳಬೇಡ ಎಂದು ನನ್ನನ್ನೆ ಬಯ್ಯುತ್ತಿದ್ದ. ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ. ಕೆನಾಡಾಗೆ ಯಾರೇ ಬರುವುದಿದ್ದರೂ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದ ಎಂದು ಗೃಹ ಸಚಿವರಿಗೆ ವಿವರಿಸಿದ್ದಾರೆ.

ಕೆನಡಾದಲ್ಲಿ ಕನ್ನಡಾಭಿಮಾನ ಬಿತ್ತುವಲ್ಲಿ ಚಂದನ್ ಪಾತ್ರ ಪ್ರಮುಖವಾಗಿತ್ತು. ಕನ್ನಡ ಚಿತ್ರಗಳನ್ನು ಅಲ್ಲಿ ಬಿಡುಗಡೆ ಮಾಡಿಸಲು ಯತ್ನಿಸುತ್ತಿದ್ದರು ಎಂದು ಅವರ ಸ್ನೇಹಿತರು ಹೇಳಿದ್ದಾರೆ. ಸಚಿವ ಪರಮೇಶ್ವರ್, ಇದು ಆಗಬಾರದಿತ್ತು. ಧೈರ್ಯ ತಂದುಕೊಳ್ಳಿ. ನಾವು ನಿಮ್ಮ ಜೊತೆಗಿದ್ದೇವೆ ಎಂದು ಪೋಷಕರಿಗೆ ಧೈರ್ಯ ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

2 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

2 hours ago

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ರಮಣ್ ಕಿಶೋರ್ ಎಂಬ ‘ಗಾಂವ್ ಕಾ ಡಾಕ್ಟರ್’

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…

2 hours ago

ದೇವಸ್ಥಾನಗಳ ಅಭಿವೃದ್ಧಿಗೆ ಧಾರ್ಮಿಕ ಪ್ರವಾಸೋದ್ಯಮ ವರದಾನ

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…

2 hours ago

ಮಂಡ್ಯ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…

2 hours ago