ರಾಜ್ಯ

ಬೆಂಗಳೂರು ಕಂಬಳದಲ್ಲಿ ಪದಕ ಗೆದ್ದ ಕಾಂತಾರ ಚಿತ್ರದ ಕೋಣಗಳು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡಾ ಆಚರಣೆಯಾದ ಕಂಬಳ ಸ್ಪರ್ಧೆ ಆಯೋಜನೆಯಾಗಿದೆ. ಈ ಕಂಬಳದಲ್ಲಿ 200 ಕೋಣಗಳು ಭಾಗಿಯಾಗಿದ್ದು, ವಿವಿಧ ಕಂಬಳ ಸ್ಪರ್ಧೆಗಳಲ್ಲಿ ಪೈಪೋಟಿ ನಡೆಸುತ್ತಿವೆ. ಇನ್ನು ಇದೇ ಕಂಬಳದ ಕನೆಹಲಗೆ ವಿಭಾಗದಲ್ಲಿ ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೋಣಗಳು ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡಿವೆ.

ಹೌದು, ಕಾಂತಾರ ಚಿತ್ರದಲ್ಲಿ ನಟ ರಿಷಬ್‌ ಶೆಟ್ಟಿ ನಿರ್ವಹಿಸಿದ್ದ ಕಾಡುಬೆಟ್ಟು ಶಿವ ಪಾತ್ರದ ಇಂಟ್ರೊಡಕ್ಷನ್‌ ದೃಶ್ಯ ಯಾರಿಗೆ ತಾನೇ ನೆನಪಿಲ್ಲ ಹೇಳಿ. ಈ ದೃಶ್ಯದಲ್ಲಿ ರಿಷಬ್‌ ಶೆಟ್ಟಿ ಎರಡು ಕೋಣಗಳನ್ನು ಹಿಡಿದು ಕಂಬಳ ಸ್ಪರ್ಧೆಯಲ್ಲಿ ಭಾಗವಹಿಸಿ ಮೆಡಲ್ ಗೆಲ್ಲುತ್ತಾರೆ. ಕೊನೆಗೆ ಗೆದ್ದ ಪದಕವನ್ನು ಕೋಣಗಳಿಗೆ ಅರ್ಪಿಸುತ್ತಾರೆ.

ಹೀಗೆ ರೀಲ್‌ನಲ್ಲಿ ಓಡಿ ಪದಕ ಗೆದ್ದ ಅಪ್ಪು ಹಾಗೂ ಕಿಟ್ಟಿ ಎಂಬ ಈ ಎರಡು ಕೋಣಗಳು ಇದೀಗ ರಿಯಲ್‌ನಲ್ಲಿಯೂ ಪದಕವನ್ನು ಗೆದ್ದಿವೆ. ಇನ್ನು ಉಡುಪಿಯ ಬೈಂದೂರಿನ ಚೈತ್ರ ಪರಮೇಶ್ವರ್‌ ಭಟ್‌ ಎಂಬುವವರ ಒಡೆತನದ ಕೋಣಗಳು ಇವಾಗಿದ್ದು, ಚಿತ್ರದಲ್ಲಿ ಕಂಡಿದ್ದ ಈ ಕೋಣಗಳನ್ನು ನಿಜವಾಗಿಯೂ ನೋಡಿದ ಬೆಂಗಳೂರು ಜನತೆ ಆ ಕೋಣಗಳ ಫೋಟೊಗಳನ್ನು ಮೊಬೈಲ್‌ನಲ್ಲಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟಿದ್ದಾರೆ.

andolana

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

33 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

58 mins ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

1 hour ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago