ರಾಜ್ಯ

ಬೆಂಗಳೂರು ಕಂಬಳದಲ್ಲಿ ಪದಕ ಗೆದ್ದ ಕಾಂತಾರ ಚಿತ್ರದ ಕೋಣಗಳು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡಾ ಆಚರಣೆಯಾದ ಕಂಬಳ ಸ್ಪರ್ಧೆ ಆಯೋಜನೆಯಾಗಿದೆ. ಈ ಕಂಬಳದಲ್ಲಿ 200 ಕೋಣಗಳು ಭಾಗಿಯಾಗಿದ್ದು, ವಿವಿಧ ಕಂಬಳ ಸ್ಪರ್ಧೆಗಳಲ್ಲಿ ಪೈಪೋಟಿ ನಡೆಸುತ್ತಿವೆ. ಇನ್ನು ಇದೇ ಕಂಬಳದ ಕನೆಹಲಗೆ ವಿಭಾಗದಲ್ಲಿ ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೋಣಗಳು ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡಿವೆ.

ಹೌದು, ಕಾಂತಾರ ಚಿತ್ರದಲ್ಲಿ ನಟ ರಿಷಬ್‌ ಶೆಟ್ಟಿ ನಿರ್ವಹಿಸಿದ್ದ ಕಾಡುಬೆಟ್ಟು ಶಿವ ಪಾತ್ರದ ಇಂಟ್ರೊಡಕ್ಷನ್‌ ದೃಶ್ಯ ಯಾರಿಗೆ ತಾನೇ ನೆನಪಿಲ್ಲ ಹೇಳಿ. ಈ ದೃಶ್ಯದಲ್ಲಿ ರಿಷಬ್‌ ಶೆಟ್ಟಿ ಎರಡು ಕೋಣಗಳನ್ನು ಹಿಡಿದು ಕಂಬಳ ಸ್ಪರ್ಧೆಯಲ್ಲಿ ಭಾಗವಹಿಸಿ ಮೆಡಲ್ ಗೆಲ್ಲುತ್ತಾರೆ. ಕೊನೆಗೆ ಗೆದ್ದ ಪದಕವನ್ನು ಕೋಣಗಳಿಗೆ ಅರ್ಪಿಸುತ್ತಾರೆ.

ಹೀಗೆ ರೀಲ್‌ನಲ್ಲಿ ಓಡಿ ಪದಕ ಗೆದ್ದ ಅಪ್ಪು ಹಾಗೂ ಕಿಟ್ಟಿ ಎಂಬ ಈ ಎರಡು ಕೋಣಗಳು ಇದೀಗ ರಿಯಲ್‌ನಲ್ಲಿಯೂ ಪದಕವನ್ನು ಗೆದ್ದಿವೆ. ಇನ್ನು ಉಡುಪಿಯ ಬೈಂದೂರಿನ ಚೈತ್ರ ಪರಮೇಶ್ವರ್‌ ಭಟ್‌ ಎಂಬುವವರ ಒಡೆತನದ ಕೋಣಗಳು ಇವಾಗಿದ್ದು, ಚಿತ್ರದಲ್ಲಿ ಕಂಡಿದ್ದ ಈ ಕೋಣಗಳನ್ನು ನಿಜವಾಗಿಯೂ ನೋಡಿದ ಬೆಂಗಳೂರು ಜನತೆ ಆ ಕೋಣಗಳ ಫೋಟೊಗಳನ್ನು ಮೊಬೈಲ್‌ನಲ್ಲಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟಿದ್ದಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

29 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago