ರಾಜ್ಯ

ಬೆಂಗಳೂರು ಕಂಬಳದಲ್ಲಿ ಪದಕ ಗೆದ್ದ ಕಾಂತಾರ ಚಿತ್ರದ ಕೋಣಗಳು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡಾ ಆಚರಣೆಯಾದ ಕಂಬಳ ಸ್ಪರ್ಧೆ ಆಯೋಜನೆಯಾಗಿದೆ. ಈ ಕಂಬಳದಲ್ಲಿ 200 ಕೋಣಗಳು ಭಾಗಿಯಾಗಿದ್ದು, ವಿವಿಧ ಕಂಬಳ ಸ್ಪರ್ಧೆಗಳಲ್ಲಿ ಪೈಪೋಟಿ ನಡೆಸುತ್ತಿವೆ. ಇನ್ನು ಇದೇ ಕಂಬಳದ ಕನೆಹಲಗೆ ವಿಭಾಗದಲ್ಲಿ ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೋಣಗಳು ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡಿವೆ.

ಹೌದು, ಕಾಂತಾರ ಚಿತ್ರದಲ್ಲಿ ನಟ ರಿಷಬ್‌ ಶೆಟ್ಟಿ ನಿರ್ವಹಿಸಿದ್ದ ಕಾಡುಬೆಟ್ಟು ಶಿವ ಪಾತ್ರದ ಇಂಟ್ರೊಡಕ್ಷನ್‌ ದೃಶ್ಯ ಯಾರಿಗೆ ತಾನೇ ನೆನಪಿಲ್ಲ ಹೇಳಿ. ಈ ದೃಶ್ಯದಲ್ಲಿ ರಿಷಬ್‌ ಶೆಟ್ಟಿ ಎರಡು ಕೋಣಗಳನ್ನು ಹಿಡಿದು ಕಂಬಳ ಸ್ಪರ್ಧೆಯಲ್ಲಿ ಭಾಗವಹಿಸಿ ಮೆಡಲ್ ಗೆಲ್ಲುತ್ತಾರೆ. ಕೊನೆಗೆ ಗೆದ್ದ ಪದಕವನ್ನು ಕೋಣಗಳಿಗೆ ಅರ್ಪಿಸುತ್ತಾರೆ.

ಹೀಗೆ ರೀಲ್‌ನಲ್ಲಿ ಓಡಿ ಪದಕ ಗೆದ್ದ ಅಪ್ಪು ಹಾಗೂ ಕಿಟ್ಟಿ ಎಂಬ ಈ ಎರಡು ಕೋಣಗಳು ಇದೀಗ ರಿಯಲ್‌ನಲ್ಲಿಯೂ ಪದಕವನ್ನು ಗೆದ್ದಿವೆ. ಇನ್ನು ಉಡುಪಿಯ ಬೈಂದೂರಿನ ಚೈತ್ರ ಪರಮೇಶ್ವರ್‌ ಭಟ್‌ ಎಂಬುವವರ ಒಡೆತನದ ಕೋಣಗಳು ಇವಾಗಿದ್ದು, ಚಿತ್ರದಲ್ಲಿ ಕಂಡಿದ್ದ ಈ ಕೋಣಗಳನ್ನು ನಿಜವಾಗಿಯೂ ನೋಡಿದ ಬೆಂಗಳೂರು ಜನತೆ ಆ ಕೋಣಗಳ ಫೋಟೊಗಳನ್ನು ಮೊಬೈಲ್‌ನಲ್ಲಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟಿದ್ದಾರೆ.

andolana

Recent Posts

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

15 mins ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

27 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

4 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

9 hours ago