ರಾಜ್ಯ

ಬೆಂಗಳೂರು ಕಂಬಳದಲ್ಲಿ ಪದಕ ಗೆದ್ದ ಕಾಂತಾರ ಚಿತ್ರದ ಕೋಣಗಳು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡಾ ಆಚರಣೆಯಾದ ಕಂಬಳ ಸ್ಪರ್ಧೆ ಆಯೋಜನೆಯಾಗಿದೆ. ಈ ಕಂಬಳದಲ್ಲಿ 200 ಕೋಣಗಳು ಭಾಗಿಯಾಗಿದ್ದು, ವಿವಿಧ ಕಂಬಳ ಸ್ಪರ್ಧೆಗಳಲ್ಲಿ ಪೈಪೋಟಿ ನಡೆಸುತ್ತಿವೆ. ಇನ್ನು ಇದೇ ಕಂಬಳದ ಕನೆಹಲಗೆ ವಿಭಾಗದಲ್ಲಿ ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೋಣಗಳು ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡಿವೆ.

ಹೌದು, ಕಾಂತಾರ ಚಿತ್ರದಲ್ಲಿ ನಟ ರಿಷಬ್‌ ಶೆಟ್ಟಿ ನಿರ್ವಹಿಸಿದ್ದ ಕಾಡುಬೆಟ್ಟು ಶಿವ ಪಾತ್ರದ ಇಂಟ್ರೊಡಕ್ಷನ್‌ ದೃಶ್ಯ ಯಾರಿಗೆ ತಾನೇ ನೆನಪಿಲ್ಲ ಹೇಳಿ. ಈ ದೃಶ್ಯದಲ್ಲಿ ರಿಷಬ್‌ ಶೆಟ್ಟಿ ಎರಡು ಕೋಣಗಳನ್ನು ಹಿಡಿದು ಕಂಬಳ ಸ್ಪರ್ಧೆಯಲ್ಲಿ ಭಾಗವಹಿಸಿ ಮೆಡಲ್ ಗೆಲ್ಲುತ್ತಾರೆ. ಕೊನೆಗೆ ಗೆದ್ದ ಪದಕವನ್ನು ಕೋಣಗಳಿಗೆ ಅರ್ಪಿಸುತ್ತಾರೆ.

ಹೀಗೆ ರೀಲ್‌ನಲ್ಲಿ ಓಡಿ ಪದಕ ಗೆದ್ದ ಅಪ್ಪು ಹಾಗೂ ಕಿಟ್ಟಿ ಎಂಬ ಈ ಎರಡು ಕೋಣಗಳು ಇದೀಗ ರಿಯಲ್‌ನಲ್ಲಿಯೂ ಪದಕವನ್ನು ಗೆದ್ದಿವೆ. ಇನ್ನು ಉಡುಪಿಯ ಬೈಂದೂರಿನ ಚೈತ್ರ ಪರಮೇಶ್ವರ್‌ ಭಟ್‌ ಎಂಬುವವರ ಒಡೆತನದ ಕೋಣಗಳು ಇವಾಗಿದ್ದು, ಚಿತ್ರದಲ್ಲಿ ಕಂಡಿದ್ದ ಈ ಕೋಣಗಳನ್ನು ನಿಜವಾಗಿಯೂ ನೋಡಿದ ಬೆಂಗಳೂರು ಜನತೆ ಆ ಕೋಣಗಳ ಫೋಟೊಗಳನ್ನು ಮೊಬೈಲ್‌ನಲ್ಲಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟಿದ್ದಾರೆ.

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

2 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

3 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago