ರಾಜ್ಯ

ಬೆಂಗಳೂರು ಕಂಬಳದಲ್ಲಿ ಪದಕ ಗೆದ್ದ ಕಾಂತಾರ ಚಿತ್ರದ ಕೋಣಗಳು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡಾ ಆಚರಣೆಯಾದ ಕಂಬಳ ಸ್ಪರ್ಧೆ ಆಯೋಜನೆಯಾಗಿದೆ. ಈ ಕಂಬಳದಲ್ಲಿ 200 ಕೋಣಗಳು ಭಾಗಿಯಾಗಿದ್ದು, ವಿವಿಧ ಕಂಬಳ ಸ್ಪರ್ಧೆಗಳಲ್ಲಿ ಪೈಪೋಟಿ ನಡೆಸುತ್ತಿವೆ. ಇನ್ನು ಇದೇ ಕಂಬಳದ ಕನೆಹಲಗೆ ವಿಭಾಗದಲ್ಲಿ ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೋಣಗಳು ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡಿವೆ.

ಹೌದು, ಕಾಂತಾರ ಚಿತ್ರದಲ್ಲಿ ನಟ ರಿಷಬ್‌ ಶೆಟ್ಟಿ ನಿರ್ವಹಿಸಿದ್ದ ಕಾಡುಬೆಟ್ಟು ಶಿವ ಪಾತ್ರದ ಇಂಟ್ರೊಡಕ್ಷನ್‌ ದೃಶ್ಯ ಯಾರಿಗೆ ತಾನೇ ನೆನಪಿಲ್ಲ ಹೇಳಿ. ಈ ದೃಶ್ಯದಲ್ಲಿ ರಿಷಬ್‌ ಶೆಟ್ಟಿ ಎರಡು ಕೋಣಗಳನ್ನು ಹಿಡಿದು ಕಂಬಳ ಸ್ಪರ್ಧೆಯಲ್ಲಿ ಭಾಗವಹಿಸಿ ಮೆಡಲ್ ಗೆಲ್ಲುತ್ತಾರೆ. ಕೊನೆಗೆ ಗೆದ್ದ ಪದಕವನ್ನು ಕೋಣಗಳಿಗೆ ಅರ್ಪಿಸುತ್ತಾರೆ.

ಹೀಗೆ ರೀಲ್‌ನಲ್ಲಿ ಓಡಿ ಪದಕ ಗೆದ್ದ ಅಪ್ಪು ಹಾಗೂ ಕಿಟ್ಟಿ ಎಂಬ ಈ ಎರಡು ಕೋಣಗಳು ಇದೀಗ ರಿಯಲ್‌ನಲ್ಲಿಯೂ ಪದಕವನ್ನು ಗೆದ್ದಿವೆ. ಇನ್ನು ಉಡುಪಿಯ ಬೈಂದೂರಿನ ಚೈತ್ರ ಪರಮೇಶ್ವರ್‌ ಭಟ್‌ ಎಂಬುವವರ ಒಡೆತನದ ಕೋಣಗಳು ಇವಾಗಿದ್ದು, ಚಿತ್ರದಲ್ಲಿ ಕಂಡಿದ್ದ ಈ ಕೋಣಗಳನ್ನು ನಿಜವಾಗಿಯೂ ನೋಡಿದ ಬೆಂಗಳೂರು ಜನತೆ ಆ ಕೋಣಗಳ ಫೋಟೊಗಳನ್ನು ಮೊಬೈಲ್‌ನಲ್ಲಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟಿದ್ದಾರೆ.

andolana

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago