Mysore
31
scattered clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಕಾಂತಾರ ಮಿಮಿಕ್ರಿ ವಿವಾದ: ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿಗೆ ಕೋರ್ಟ್‌ ಸೂಚನೆ

ಬೆಂಗಳೂರು: ಕಾಂತಾರ ಚಾಪ್ಟರ್-‌1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಒಂದು ತಿಂಗಳೊಳಗೆ ಮೈಸೂರಿನ ಚಾಮುಂಡಿಬೆಟ್ಟ ದೇವಸ್ಥಾನಕ್ಕೆ ಭೇಟಿ ನೀಡಲು ನಿರ್ದೇಶಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಅರ್ಜಿ ವಿಲೇವಾರಿ ಮಾಡಿದೆ.

ಪ್ರತಿಯೊಂದು ಪದಕ್ಕೂ ತನ್ನದೇ ಆದ ತೂಕವಿದೆ. ಪದಗಳು ಪ್ರಭಾವ ಮತ್ತು ಪರಿಣಾಮಗಳನ್ನು ಉಂಟು ಮಾಡುತ್ತವೆ. ಇದೇ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಲಾಗುವುದು ಎಂದು ರಣವೀರ್‌ ಅಫಿಡವಿಟ್‌ನಲ್ಲಿ ಹೇಳಿದ್ದಾರೆ. ಸಮಯ ಬಂದಾಗ ಎಂದು ಹೇಳಿದ್ದಾರೆ. ಅದು 30, 40 ದಿನವಾಗಬಹುದು. ಒಂದು ವರ್ಷ.. ಹತ್ತು ವರ್ಷವಾಗಬಹುದು ಎಂದು ಶಂಕೆ ವ್ಯಕ್ತಪಡಿಸಿದರು. ನಾಲ್ಕು ವಾರಗಳಲ್ಲಿ ರಣವೀರ್‌ ದೇವಸ್ಥಾನಕ್ಕೆ ಭೇಟಿ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗುವುದು ಎಂದು ಹೇಳಿದರು.

ಇದನ್ನು ಇತರೆ ಸೆಲೆಬ್ರಿಟಿಗಳು ಲಘುವಾಗಿ ಪರಿಗಣಿಸಬಾರದು. ಕಠಿಣ ಎಚ್ಚರಿಕೆಯನ್ನು ಈ ನ್ಯಾಯಾಲಯ ನೀಡಬೇಕು ಎಂದು ಮಲೆಯಾಳ್‌ ಕೇಳಿದರು. ಇದಕ್ಕೆ ಪೀಠವು ಖಂಡಿತವಾಗಿಯೂ ಎಚ್ಚರಿಸಲಾಗುವುದು. ಕಾನೂನಿನ ಅನ್ವಯ ಉತ್ತರಿಸಬೇಕು ಎಂದಾದರೆ ಎಚ್ಚರಿಸುವ ಪರಿಸ್ಥಿತಿ ನಿರ್ಮಾಣವೇ ಆಗಲ್ಲ ಎಂದಿತು.

ಒಟ್ಟಾರೆಯಾಗಿ ಒಂದು ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿ ನೀಡಬೇಕು ಎಂದು ಸೂಚನೆ ನೀಡಿತು.

Tags:
error: Content is protected !!