ರಾಜ್ಯ

ಕಾಂತಾರ ಮಿಮಿಕ್ರಿ ವಿವಾದ: ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿಗೆ ಕೋರ್ಟ್‌ ಸೂಚನೆ

ಬೆಂಗಳೂರು: ಕಾಂತಾರ ಚಾಪ್ಟರ್-‌1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಒಂದು ತಿಂಗಳೊಳಗೆ ಮೈಸೂರಿನ ಚಾಮುಂಡಿಬೆಟ್ಟ ದೇವಸ್ಥಾನಕ್ಕೆ ಭೇಟಿ ನೀಡಲು ನಿರ್ದೇಶಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಅರ್ಜಿ ವಿಲೇವಾರಿ ಮಾಡಿದೆ.

ಪ್ರತಿಯೊಂದು ಪದಕ್ಕೂ ತನ್ನದೇ ಆದ ತೂಕವಿದೆ. ಪದಗಳು ಪ್ರಭಾವ ಮತ್ತು ಪರಿಣಾಮಗಳನ್ನು ಉಂಟು ಮಾಡುತ್ತವೆ. ಇದೇ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಲಾಗುವುದು ಎಂದು ರಣವೀರ್‌ ಅಫಿಡವಿಟ್‌ನಲ್ಲಿ ಹೇಳಿದ್ದಾರೆ. ಸಮಯ ಬಂದಾಗ ಎಂದು ಹೇಳಿದ್ದಾರೆ. ಅದು 30, 40 ದಿನವಾಗಬಹುದು. ಒಂದು ವರ್ಷ.. ಹತ್ತು ವರ್ಷವಾಗಬಹುದು ಎಂದು ಶಂಕೆ ವ್ಯಕ್ತಪಡಿಸಿದರು. ನಾಲ್ಕು ವಾರಗಳಲ್ಲಿ ರಣವೀರ್‌ ದೇವಸ್ಥಾನಕ್ಕೆ ಭೇಟಿ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗುವುದು ಎಂದು ಹೇಳಿದರು.

ಇದನ್ನು ಇತರೆ ಸೆಲೆಬ್ರಿಟಿಗಳು ಲಘುವಾಗಿ ಪರಿಗಣಿಸಬಾರದು. ಕಠಿಣ ಎಚ್ಚರಿಕೆಯನ್ನು ಈ ನ್ಯಾಯಾಲಯ ನೀಡಬೇಕು ಎಂದು ಮಲೆಯಾಳ್‌ ಕೇಳಿದರು. ಇದಕ್ಕೆ ಪೀಠವು ಖಂಡಿತವಾಗಿಯೂ ಎಚ್ಚರಿಸಲಾಗುವುದು. ಕಾನೂನಿನ ಅನ್ವಯ ಉತ್ತರಿಸಬೇಕು ಎಂದಾದರೆ ಎಚ್ಚರಿಸುವ ಪರಿಸ್ಥಿತಿ ನಿರ್ಮಾಣವೇ ಆಗಲ್ಲ ಎಂದಿತು.

ಒಟ್ಟಾರೆಯಾಗಿ ಒಂದು ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿ ನೀಡಬೇಕು ಎಂದು ಸೂಚನೆ ನೀಡಿತು.

ಆಂದೋಲನ ಡೆಸ್ಕ್

Recent Posts

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

19 mins ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

26 mins ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

5 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

5 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

6 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

7 hours ago