ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಒಂದು ತಿಂಗಳೊಳಗೆ ಮೈಸೂರಿನ ಚಾಮುಂಡಿಬೆಟ್ಟ ದೇವಸ್ಥಾನಕ್ಕೆ ಭೇಟಿ ನೀಡಲು ನಿರ್ದೇಶಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅರ್ಜಿ ವಿಲೇವಾರಿ ಮಾಡಿದೆ.
ಪ್ರತಿಯೊಂದು ಪದಕ್ಕೂ ತನ್ನದೇ ಆದ ತೂಕವಿದೆ. ಪದಗಳು ಪ್ರಭಾವ ಮತ್ತು ಪರಿಣಾಮಗಳನ್ನು ಉಂಟು ಮಾಡುತ್ತವೆ. ಇದೇ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಲಾಗುವುದು ಎಂದು ರಣವೀರ್ ಅಫಿಡವಿಟ್ನಲ್ಲಿ ಹೇಳಿದ್ದಾರೆ. ಸಮಯ ಬಂದಾಗ ಎಂದು ಹೇಳಿದ್ದಾರೆ. ಅದು 30, 40 ದಿನವಾಗಬಹುದು. ಒಂದು ವರ್ಷ.. ಹತ್ತು ವರ್ಷವಾಗಬಹುದು ಎಂದು ಶಂಕೆ ವ್ಯಕ್ತಪಡಿಸಿದರು. ನಾಲ್ಕು ವಾರಗಳಲ್ಲಿ ರಣವೀರ್ ದೇವಸ್ಥಾನಕ್ಕೆ ಭೇಟಿ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗುವುದು ಎಂದು ಹೇಳಿದರು.
ಇದನ್ನು ಇತರೆ ಸೆಲೆಬ್ರಿಟಿಗಳು ಲಘುವಾಗಿ ಪರಿಗಣಿಸಬಾರದು. ಕಠಿಣ ಎಚ್ಚರಿಕೆಯನ್ನು ಈ ನ್ಯಾಯಾಲಯ ನೀಡಬೇಕು ಎಂದು ಮಲೆಯಾಳ್ ಕೇಳಿದರು. ಇದಕ್ಕೆ ಪೀಠವು ಖಂಡಿತವಾಗಿಯೂ ಎಚ್ಚರಿಸಲಾಗುವುದು. ಕಾನೂನಿನ ಅನ್ವಯ ಉತ್ತರಿಸಬೇಕು ಎಂದಾದರೆ ಎಚ್ಚರಿಸುವ ಪರಿಸ್ಥಿತಿ ನಿರ್ಮಾಣವೇ ಆಗಲ್ಲ ಎಂದಿತು.
ಒಟ್ಟಾರೆಯಾಗಿ ಒಂದು ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್ ಭೇಟಿ ನೀಡಬೇಕು ಎಂದು ಸೂಚನೆ ನೀಡಿತು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…