ಬೆಂಗಳೂರು : ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಅನುಷ್ಠಾನಗೊಳಿಸಬಾರದು. ಒಂದು ವೇಳೆ ಸಮೀಕ್ಷೆಯ ಅಗತ್ಯವಿದ್ದರೆ ಮತ್ತೊಮ್ಮೆ ವೈಜ್ಞಾನಿಕ ಸಮೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವನ್ನು ಒಕ್ಕಲಿಗರ ಸಮುದಾಯ ಮಾಡಿದೆ.
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಚಿಂತನ-ಮಂಥನ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಸುದೀರ್ಘ ಚರ್ಚೆ ನಡೆಸಿ ಕಾಂತರಾಜು ವರದಿಯನ್ನು ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ತೀರ್ಮಾನಿಸಲಾಗಿದೆ.ವರದಿಯೂ ಅವೈಜ್ಞಾನಿಕವಾಗಿದ್ದು, ದೋಷ ಪೂರಿತವಾಗಿದೆ. ವರದಿ ಅನುಷ್ಠಾನವಾದರೆ ಕೇವಲ ಒಕ್ಕಲಿಗ ಸಮುದಾಯ ಅಷ್ಟೇ ಅಲ್ಲ, ಇತರೆ ಸಮುದಾಯಗಳಿಗೂ ತೊಂದರೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂಥನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಸಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಚಿಂತನ-ಮಂಥನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಅಲ್ಲದೆ, ಮೀಸಲಾತಿಯಿಂದ ಸಮುದಾಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂಘ- ಸಂಸ್ಥೆಗಳ ಜತೆಗೂಡಿ ಪಕ್ಷಾತೀತವಾಗಿ ಒಟ್ಟಾಗಿ ಒಕ್ಕಲಿಗ ಸಮುದಾಯದ ಹಿತರಕ್ಷಣೆಗೆ ಶ್ರಮಿಸಲು ನಿರ್ಧರಿಸಲಾಗಿದೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ನಿರ್ಮಲಾನಂಥನಾಥ ಸ್ವಾಮೀಜಿ ಅವರು ಕಾಂತರಾಜು ಅಧ್ಯಕ್ಷರಾಗಿದ್ದ ಅವಯಲ್ಲಿ ತಯಾರಿಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯೂ ದೋಷಪೂರಿತವಾಗಿದೆ. ಈ ವರದಿಯನ್ನು ಸರ್ಕಾರ ಸ್ವೀಕರಿಸಬಾರದು, ಸ್ವೀಕರಿಸಿದರೂ ಅನುಷ್ಠಾನಗೊಳಿಸಬಾರದು. 8 ವರ್ಷಗಳ ಹಿಂದೆ ತಯಾರಿಸಿದ ವರದಿ ಅವೈಜ್ಞಾನಿಕವಾಗಿದೆ. ಒಂದು ವೇಳೆ ವರದಿ ಅನುಷ್ಠಾನಗೊಳಿಸಬೇಕೆಂದಾದರೆ, ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ವರದಿ ಪಡೆಯಲಿ. ಅಲ್ಲದೆ, ಮೀಸಲಾತಿ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿಲುವು ತಳೆಯಬೇಕು. ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸೌಜನ್ಯವಾಗಿ ಮನವಿ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…