ರಾಜ್ಯ

ಕಾಂತಾರ ಚೆಲುವೆ ರುಕ್ಮಿಣಿ ವಸಂತ್‌ಗೆ ಸೈಬರ್‌ ಖದೀಮರ ಕಾಟ

ಬೆಂಗಳೂರು: ಅನಾಮಿಕ ವ್ಯಕ್ತಿಯೋರ್ವ ಕಾಂತಾರ ಬೆಡಗಿ ರುಕ್ಮಿಣಿ ವಸಂತ್‌ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಕೇಳುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡಿರುವ ರುಕ್ಮಿಣಿ ವಸಂತ್‌ ಅವರು, ಅನಾಮಿಕ ವ್ಯಕ್ತಿಯೋರ್ವ ನನ್ನ ಹೆಸರಿನಲ್ಲಿ ಹಣ ಕೇಳುತ್ತಿದ್ದಾನೆ. ಯಾರೂ ಕೂಡ ಆತನನ್ನು ನಂಬಿ ಹಣ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನು ಓದಿ: ಮೈಸೂರು | ಸೈಬರ್‌ ವಂಚಕರಿಂದ 21 ಲಕ್ಷಕ್ಕೂ ಹೆಚ್ಚ ಹಣ ಕಳೆದುಕೊಂಡ ಮಹಿಳೆ

ಆ ವ್ಯಕ್ತಿ ನನ್ನಂತೆ ನಟಿಸಿ ಎಲ್ಲರ ಬಳಿಯೂ ಹಣ ಕೇಳುತ್ತಿದ್ದಾನೆ. ಆ ನಂಬರ್‌ನಿಂದ ಬರುವ ಸಂದೇಶಗಳು ಸಂಪೂರ್ಣವಾಗಿ ನಕಲಿಯಾಗಿವೆ.

ದಯವಿಟ್ಟು ಅಂತಹ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ. ಈ ಸೋಗು ಹಾಕುವ ಕೃತ್ಯವು ಸೈಬರ್‌ ಅಪರಾಧದ ವ್ಯಾಪ್ತಿಗೆ ಬರುತ್ತದೆ. ಅಂತಹ ವಂಚನೆ ಹಾಗೂ ದಾರಿತಪ್ಪಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

ಯಾವುದೇ ಸ್ಪಷ್ಟೀಕರಣ ಅಥವಾ ಪರಿಶೀಲನೆಗಾಗಿ ನೀವು ನೇರವಾಗಿ ನನ್ನನ್ನು ಅಥವಾ ನನ್ನ ತಂಡವನ್ನು ಸಂಪರ್ಕಿಸಬಹುದು. ನಿಮ್ಮ ತಿಳುವಳಿಕೆ ಮತ್ತು ಸಹಕಾರಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಮತ್ತು ಸುರಕ್ಷಿತವಾಗಿರಿ ಎಂದು ಟ್ವೀಟ್‌ನಲ್ಲಿ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

4 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

5 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

5 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

5 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

5 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

6 hours ago