ರಾಜ್ಯ

ಕಾಂತಾರ ಚೆಲುವೆ ರುಕ್ಮಿಣಿ ವಸಂತ್‌ಗೆ ಸೈಬರ್‌ ಖದೀಮರ ಕಾಟ

ಬೆಂಗಳೂರು: ಅನಾಮಿಕ ವ್ಯಕ್ತಿಯೋರ್ವ ಕಾಂತಾರ ಬೆಡಗಿ ರುಕ್ಮಿಣಿ ವಸಂತ್‌ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಕೇಳುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡಿರುವ ರುಕ್ಮಿಣಿ ವಸಂತ್‌ ಅವರು, ಅನಾಮಿಕ ವ್ಯಕ್ತಿಯೋರ್ವ ನನ್ನ ಹೆಸರಿನಲ್ಲಿ ಹಣ ಕೇಳುತ್ತಿದ್ದಾನೆ. ಯಾರೂ ಕೂಡ ಆತನನ್ನು ನಂಬಿ ಹಣ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನು ಓದಿ: ಮೈಸೂರು | ಸೈಬರ್‌ ವಂಚಕರಿಂದ 21 ಲಕ್ಷಕ್ಕೂ ಹೆಚ್ಚ ಹಣ ಕಳೆದುಕೊಂಡ ಮಹಿಳೆ

ಆ ವ್ಯಕ್ತಿ ನನ್ನಂತೆ ನಟಿಸಿ ಎಲ್ಲರ ಬಳಿಯೂ ಹಣ ಕೇಳುತ್ತಿದ್ದಾನೆ. ಆ ನಂಬರ್‌ನಿಂದ ಬರುವ ಸಂದೇಶಗಳು ಸಂಪೂರ್ಣವಾಗಿ ನಕಲಿಯಾಗಿವೆ.

ದಯವಿಟ್ಟು ಅಂತಹ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ. ಈ ಸೋಗು ಹಾಕುವ ಕೃತ್ಯವು ಸೈಬರ್‌ ಅಪರಾಧದ ವ್ಯಾಪ್ತಿಗೆ ಬರುತ್ತದೆ. ಅಂತಹ ವಂಚನೆ ಹಾಗೂ ದಾರಿತಪ್ಪಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

ಯಾವುದೇ ಸ್ಪಷ್ಟೀಕರಣ ಅಥವಾ ಪರಿಶೀಲನೆಗಾಗಿ ನೀವು ನೇರವಾಗಿ ನನ್ನನ್ನು ಅಥವಾ ನನ್ನ ತಂಡವನ್ನು ಸಂಪರ್ಕಿಸಬಹುದು. ನಿಮ್ಮ ತಿಳುವಳಿಕೆ ಮತ್ತು ಸಹಕಾರಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಮತ್ತು ಸುರಕ್ಷಿತವಾಗಿರಿ ಎಂದು ಟ್ವೀಟ್‌ನಲ್ಲಿ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

12 hours ago