ಬೆಂಗಳೂರು: ಅನಾಮಿಕ ವ್ಯಕ್ತಿಯೋರ್ವ ಕಾಂತಾರ ಬೆಡಗಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಕೇಳುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ರುಕ್ಮಿಣಿ ವಸಂತ್ ಅವರು, ಅನಾಮಿಕ ವ್ಯಕ್ತಿಯೋರ್ವ ನನ್ನ ಹೆಸರಿನಲ್ಲಿ ಹಣ ಕೇಳುತ್ತಿದ್ದಾನೆ. ಯಾರೂ ಕೂಡ ಆತನನ್ನು ನಂಬಿ ಹಣ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಇದನ್ನು ಓದಿ: ಮೈಸೂರು | ಸೈಬರ್ ವಂಚಕರಿಂದ 21 ಲಕ್ಷಕ್ಕೂ ಹೆಚ್ಚ ಹಣ ಕಳೆದುಕೊಂಡ ಮಹಿಳೆ
ಆ ವ್ಯಕ್ತಿ ನನ್ನಂತೆ ನಟಿಸಿ ಎಲ್ಲರ ಬಳಿಯೂ ಹಣ ಕೇಳುತ್ತಿದ್ದಾನೆ. ಆ ನಂಬರ್ನಿಂದ ಬರುವ ಸಂದೇಶಗಳು ಸಂಪೂರ್ಣವಾಗಿ ನಕಲಿಯಾಗಿವೆ.
ದಯವಿಟ್ಟು ಅಂತಹ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ. ಈ ಸೋಗು ಹಾಕುವ ಕೃತ್ಯವು ಸೈಬರ್ ಅಪರಾಧದ ವ್ಯಾಪ್ತಿಗೆ ಬರುತ್ತದೆ. ಅಂತಹ ವಂಚನೆ ಹಾಗೂ ದಾರಿತಪ್ಪಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ಯಾವುದೇ ಸ್ಪಷ್ಟೀಕರಣ ಅಥವಾ ಪರಿಶೀಲನೆಗಾಗಿ ನೀವು ನೇರವಾಗಿ ನನ್ನನ್ನು ಅಥವಾ ನನ್ನ ತಂಡವನ್ನು ಸಂಪರ್ಕಿಸಬಹುದು. ನಿಮ್ಮ ತಿಳುವಳಿಕೆ ಮತ್ತು ಸಹಕಾರಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಆನ್ಲೈನ್ನಲ್ಲಿ ಜಾಗರೂಕರಾಗಿರಿ ಮತ್ತು ಸುರಕ್ಷಿತವಾಗಿರಿ ಎಂದು ಟ್ವೀಟ್ನಲ್ಲಿ ಮನವಿ ಮಾಡಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…