ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್‌ ಮಾಡಿದ ಜೆಡಿಎಸ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯ ಸಾರಿಗೆ ನೌಕರರು ಪರದಾಡುವಂತಾಗಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜೆಡಿಎಸ್‌ ಸರಣಿ ಟ್ವೀಟ್‌ ಮಾಡಿ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಕಾಂಗ್ರೆಸ್‌ ಸರ್ಕಾರದ ಶಕ್ತಿ ಯೋಜನೆ ಸೇರಿದಂತೆ ಗ್ಯಾರಂಟಿಗಳ ಹೊಡೆತಕ್ಕೆ ರಾಜ್ಯದ ಸಾರಿಗೆ ಸಂಸ್ಥೆಗಳು ದಿವಾಳಿಯತ್ತ ಮುಖಮಾಡಿದೆ ಎಂದು ಕಿಡಿಕಾರಿದೆ.

ನಾಡಿನ ಜನರ ಸಂಚಾರದ ಕೊಂಡಿಯಾಗಿರುವ ಬಿಎಂಟಿಸಿ, ಕೆಎಸ್‌ಆರ್‌ಟಿಸಿ , ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳು ನಷ್ಟದ ಸುಳಿಗೆ ಸಿಲುಕಿ ಒತ್ತಾಡುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೇ ಕಾಂಗ್ರೆಸ್‌ ಸರ್ಕಾರ ಸಾರಿಗೆ ನೌಕರರ ಪಿಎಫ್‌, ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಸೇರಿದಂತೆ ಒಟ್ಟು 1,787 ಕೋಟಿ ರೂ. ಬಾಕಿ ಪಾವತಿಸಲು ಸಾಧ್ಯವಾಗದೆ ಪರದಾಡುತ್ತಿದೆ. ಆರ್ಥಿಕ ಸಮಸ್ಯೆಯಿಂದ ನೊಂದಿರುವ ಸಾರಿಗೆ ನೌಕರರು ಡಿಸೆಂಬರ್‌ 31ರಂದು ರಾಜ್ಯದಲ್ಲಿ ಸಾರಿಗೆ ಮುಷ್ಕರಕ್ಕೆ ಕರೆ ಕೊಟ್ಟಿರುವುದು ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಅಸಹಾಯಕತೆಗೆ ಸಾಕ್ಷಿ ಎಂದು ವಾಗ್ದಾಳಿ ನಡೆಸಿದೆ.

ಗುತ್ತಿಗೆದಾರ ಸಚಿನ್‌ ಪ್ರಕರಣದಲ್ಲಿ ನಿಷ್ಪಕ್ಷಪಾತದ ತನಿಖೆಗೆ ಜೆಡಿಎಸ್‌ ಆಗ್ರಹ

ಗುತ್ತಿಗೆದಾರ ಸಚಿನ್‌ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತನ ರಕ್ಷಣೆಗೆ ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರ್ಬಕೆ ಮಾಡಿಕೊಳ್ಳುತ್ತಿದೆ. ಟೆಂಡರ್‌ ವಂಚನೆ ಮಾಡಿರುವ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ 15 ಲಕ್ಷ ಲಂಚ ಪಡೆದು, ಹತ್ಯೆಯ ಬೆದರಿಕೆ ಹಾಕಿದ್ದಾರೆ ಎಂದು ಡೆತ್‌ ನೋಟ್‌ನಲ್ಲಿ ಗುತ್ತಿಗೆದಾರ ಸಚಿನ್‌ ಉಲ್ಲೇಖಿಸಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಲೀನ್‌ ಚೀಟ್‌ ಸರ್ಕಾರ, ಸಚಿವರ ಆಪ್ತನನ್ನು ಬಂಧಿಸಿ ತನಿಖೆ ನಡೆಸುವ ಬದಲು, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಪೇದೆಗಳನ್ನು ಅಮಾನತು ಮಾಡಿ ಪ್ರಿಯಾಂಕ್‌ ಖರ್ಗೆ ಬೆನ್ನಿಗೆ ನಿಂತಿದೆ. ಹೀಗಾಗಿ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಪಾತ್ರದ ಬಗ್ಗೆಯೂ ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 23 ಗುರುವಾರ

2 hours ago

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…

3 hours ago

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

12 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

12 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

14 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

14 hours ago