ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಪತ್ರ ಬರೆದಿರುವ ನಾರಾಯಣಗೌಡ ಅವರು, ಭಾಷೆ ವಿಚಾರದಲ್ಲಿ ನಿಮ್ಮ ಅಧಿಕ ಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ ಎಂದು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೇ, ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕ ಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ.
ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ. ಸಾಂವಿಧಾನಿಕ ಹೊಣೆಗಾರಿಕೆಯಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…