narayana gowda
ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್ ನಟ ಕಮಲ್ ಹಾಸನ್ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಮಲ್ ಹಾಸನ್ ಹೇಳಿಕೆ ದುರುದ್ದೇಶಪೂರಿತ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ. ಈ ಹೇಳಿಕೆ ಅವರ ಅಜ್ಞಾನವನ್ನು ಬಯಲುಗೊಳಿಸುತ್ತದೆ. ಕನ್ನಡ ಮತ್ತು ತಮಿಳು ಭಾಷೆಗಳು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇವು ತಮ್ಮದೇ ಆದ ಸ್ವತಂತ್ರ ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಹೊಂದಿದೆ.
ಇದನ್ನೂ ಓದಿ:- ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ವಿರುದ್ಧ ಸಿಡಿದೆದ್ದ ಕನ್ನಡಪರ ಸಂಘಟನೆಗಳು
ಕನ್ನಡ ಭಾಷೆಗೆ ಸುಮಾರು 4600-5000 ವರ್ಷಗಳ ಇತಿಹಾಸವಿದೆ. ಕಮಲ್ ಹಾಸನ್ ಅವರ ಹೇಳಿಕೆಯಿಂದ ಕನ್ನಡಿಗರು ಹಾಗೂ ತಮಿಳರ ನಡುವೆ ದ್ವೇಷ ಹುಟ್ಟುಹಾಕುವ ಕೆಲಸವಾಗುತ್ತಿದೆ. ಅವರು ತಕ್ಷಣವೇ ತಮ್ಮ ತಪ್ಪನ್ನು ಸರಿಪಡಿಸಿಕೊಂಡು ಕನ್ನಡಿಗರ ಭಾವನೆಗಳಿಗೆ ಗೌರವ ತೋರಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…