narayana gowda
ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್ ನಟ ಕಮಲ್ ಹಾಸನ್ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಮಲ್ ಹಾಸನ್ ಹೇಳಿಕೆ ದುರುದ್ದೇಶಪೂರಿತ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ. ಈ ಹೇಳಿಕೆ ಅವರ ಅಜ್ಞಾನವನ್ನು ಬಯಲುಗೊಳಿಸುತ್ತದೆ. ಕನ್ನಡ ಮತ್ತು ತಮಿಳು ಭಾಷೆಗಳು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇವು ತಮ್ಮದೇ ಆದ ಸ್ವತಂತ್ರ ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಹೊಂದಿದೆ.
ಇದನ್ನೂ ಓದಿ:- ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ವಿರುದ್ಧ ಸಿಡಿದೆದ್ದ ಕನ್ನಡಪರ ಸಂಘಟನೆಗಳು
ಕನ್ನಡ ಭಾಷೆಗೆ ಸುಮಾರು 4600-5000 ವರ್ಷಗಳ ಇತಿಹಾಸವಿದೆ. ಕಮಲ್ ಹಾಸನ್ ಅವರ ಹೇಳಿಕೆಯಿಂದ ಕನ್ನಡಿಗರು ಹಾಗೂ ತಮಿಳರ ನಡುವೆ ದ್ವೇಷ ಹುಟ್ಟುಹಾಕುವ ಕೆಲಸವಾಗುತ್ತಿದೆ. ಅವರು ತಕ್ಷಣವೇ ತಮ್ಮ ತಪ್ಪನ್ನು ಸರಿಪಡಿಸಿಕೊಂಡು ಕನ್ನಡಿಗರ ಭಾವನೆಗಳಿಗೆ ಗೌರವ ತೋರಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…