narayana gowda
ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್ ನಟ ಕಮಲ್ ಹಾಸನ್ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಮಲ್ ಹಾಸನ್ ಹೇಳಿಕೆ ದುರುದ್ದೇಶಪೂರಿತ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ. ಈ ಹೇಳಿಕೆ ಅವರ ಅಜ್ಞಾನವನ್ನು ಬಯಲುಗೊಳಿಸುತ್ತದೆ. ಕನ್ನಡ ಮತ್ತು ತಮಿಳು ಭಾಷೆಗಳು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇವು ತಮ್ಮದೇ ಆದ ಸ್ವತಂತ್ರ ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಹೊಂದಿದೆ.
ಇದನ್ನೂ ಓದಿ:- ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ವಿರುದ್ಧ ಸಿಡಿದೆದ್ದ ಕನ್ನಡಪರ ಸಂಘಟನೆಗಳು
ಕನ್ನಡ ಭಾಷೆಗೆ ಸುಮಾರು 4600-5000 ವರ್ಷಗಳ ಇತಿಹಾಸವಿದೆ. ಕಮಲ್ ಹಾಸನ್ ಅವರ ಹೇಳಿಕೆಯಿಂದ ಕನ್ನಡಿಗರು ಹಾಗೂ ತಮಿಳರ ನಡುವೆ ದ್ವೇಷ ಹುಟ್ಟುಹಾಕುವ ಕೆಲಸವಾಗುತ್ತಿದೆ. ಅವರು ತಕ್ಷಣವೇ ತಮ್ಮ ತಪ್ಪನ್ನು ಸರಿಪಡಿಸಿಕೊಂಡು ಕನ್ನಡಿಗರ ಭಾವನೆಗಳಿಗೆ ಗೌರವ ತೋರಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…