ಬೆಂಗಳೂರು : ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಮೂರನೇ ದಿನವೂ ಸಹ ಸದನ ವಾಲ್ಮೀಕಿ ಹಗರಣ ಚರ್ಚೆಯಲ್ಲೆ ಕಳೆದು ಹೋಗಿತ್ತು. ಅಲ್ಲದೆ ರೈತನಿಗೆ ಅಪಮಾನ ಮಾಡಿದ ಜಿಟಿ ಮಾಲ್ ವಿಚಾರ ಮುನ್ನೆಲೆಗೆ ಬಂದು ಸಾಕಷ್ಟು ಚರ್ಚೆಗಳು ನಡೆಯಿತು. ಹೀಗಾಗಿ ನಾಲ್ಕನೇ ದಿನವಾದ ಇಂದಾದರೂ ರಾಜ್ಯದಲ್ಲಿ ಉದ್ಭವಿಸಿರುವ ಸಮಸ್ಯೆಗಳು ಚರ್ಚೆಗೆ ಬರಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಸದನ ಆರಂಭದಲ್ಲೆ ವಾಲ್ಮೀಕಿ ಹಗರಣದ ವಿರುದ್ಧ ವಿರೋಧಪಕ್ಷಗಳು ಪ್ರತಿಭಟನೆ ನಡೆಸಲು ಮುಂದಾದರು.
ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ವಿರುದ್ಧ ಇಂದು ಸಹ ಬಿಜೆಪಿ ಜೆಡಿಎಸ್ ಸದನ ಬಾವಿಗಿಳಿದು, ಸಿಎಂ ಸಿದ್ದರಾಮಯ್ಯ ಉತ್ತರಕೊಡಬೇಕು. ವಾಲ್ಮೀಕಿ ಹಗರಣದಲ್ಲಿ ದುಡ್ಡು ತಿಂದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಲು ಮುಂದಾದರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಶುರುವಾಗಿ ಕೊನೆಗೆ ಸದನದಲ್ಲಿ ಗದ್ದಲ ಶುರುವಾಯಿತು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಸದನವನ್ನು ೧೦ ನಿಮಿಷಗಳ ಕಾಲ ಮುಂದೂಡಿದರು.
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…
ಹೊಸದಿಲ್ಲಿ : ಕಳೆದ ಡಿಸೆಂಬರ್ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ…