ಬೆಂಗಳೂರು : ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಮೂರನೇ ದಿನವೂ ಸಹ ಸದನ ವಾಲ್ಮೀಕಿ ಹಗರಣ ಚರ್ಚೆಯಲ್ಲೆ ಕಳೆದು ಹೋಗಿತ್ತು. ಅಲ್ಲದೆ ರೈತನಿಗೆ ಅಪಮಾನ ಮಾಡಿದ ಜಿಟಿ ಮಾಲ್ ವಿಚಾರ ಮುನ್ನೆಲೆಗೆ ಬಂದು ಸಾಕಷ್ಟು ಚರ್ಚೆಗಳು ನಡೆಯಿತು. ಹೀಗಾಗಿ ನಾಲ್ಕನೇ ದಿನವಾದ ಇಂದಾದರೂ ರಾಜ್ಯದಲ್ಲಿ ಉದ್ಭವಿಸಿರುವ ಸಮಸ್ಯೆಗಳು ಚರ್ಚೆಗೆ ಬರಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಸದನ ಆರಂಭದಲ್ಲೆ ವಾಲ್ಮೀಕಿ ಹಗರಣದ ವಿರುದ್ಧ ವಿರೋಧಪಕ್ಷಗಳು ಪ್ರತಿಭಟನೆ ನಡೆಸಲು ಮುಂದಾದರು.
ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ವಿರುದ್ಧ ಇಂದು ಸಹ ಬಿಜೆಪಿ ಜೆಡಿಎಸ್ ಸದನ ಬಾವಿಗಿಳಿದು, ಸಿಎಂ ಸಿದ್ದರಾಮಯ್ಯ ಉತ್ತರಕೊಡಬೇಕು. ವಾಲ್ಮೀಕಿ ಹಗರಣದಲ್ಲಿ ದುಡ್ಡು ತಿಂದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಲು ಮುಂದಾದರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಶುರುವಾಗಿ ಕೊನೆಗೆ ಸದನದಲ್ಲಿ ಗದ್ದಲ ಶುರುವಾಯಿತು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಸದನವನ್ನು ೧೦ ನಿಮಿಷಗಳ ಕಾಲ ಮುಂದೂಡಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…