ಬೆಂಗಳೂರು: ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ್ ಬಂದ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ಬಳಿಕ ಮಾತನಾಡಿದ ಅವರು, ನಿಮ್ಮ ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ. ಮಾರ್ಚ್22 ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆ ತನಕ ಕರ್ನಾಟಕ ಬಂದ್ ಮಾಡಲಾಗುತ್ತದೆ. ಬೆಳಿಗ್ಗೆ 10:30ಕ್ಕೆ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದರು.
ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದರೆ, ನಮ್ಮ ಕಣ್ಣಿಗೆ ಇದು ಬೆಟ್ಟ. ಮಾರ್ಚ್22ರ ಪ್ರತಿಭಟನೆ ದಿನ ಯಾರು ಮೆಟ್ರೋ ಹತ್ತಬಾರದು. ಅಂದು ಬಸ್ ಓಡಿಸಬಾರದೆಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತನಾಡಿದ್ದೇವೆ. ಇನ್ನೂ ಒಂದು ಸಲ ಹೇಳುತ್ತೇವೆ ಎಂದರು.
ಇನ್ನು ಬಂದ್ಗೆ ಸಾರಿಗೆ ನೌಕರರು ಸಹ ಬೆಂಬಲಿಸಿದ್ದಾರೆ. ಈ ಬಗ್ಗೆ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್ಗೆ KSRTC, BMTC ನೌಕರರ ಸಂಘದಿಂದ ಕೂಡ ಬೆಂಬಲ ಇದೆ. ಸಾರಿಗೆ ನೌಕರನ ಮೇಲಿನ ಹಲ್ಲೆ ಖಂಡನೀಯ. ಕರ್ನಾಟಕ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…