ಬೆಂಗಳೂರು: ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ್ ಬಂದ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ಬಳಿಕ ಮಾತನಾಡಿದ ಅವರು, ನಿಮ್ಮ ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ. ಮಾರ್ಚ್22 ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆ ತನಕ ಕರ್ನಾಟಕ ಬಂದ್ ಮಾಡಲಾಗುತ್ತದೆ. ಬೆಳಿಗ್ಗೆ 10:30ಕ್ಕೆ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದರು.
ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದರೆ, ನಮ್ಮ ಕಣ್ಣಿಗೆ ಇದು ಬೆಟ್ಟ. ಮಾರ್ಚ್22ರ ಪ್ರತಿಭಟನೆ ದಿನ ಯಾರು ಮೆಟ್ರೋ ಹತ್ತಬಾರದು. ಅಂದು ಬಸ್ ಓಡಿಸಬಾರದೆಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತನಾಡಿದ್ದೇವೆ. ಇನ್ನೂ ಒಂದು ಸಲ ಹೇಳುತ್ತೇವೆ ಎಂದರು.
ಇನ್ನು ಬಂದ್ಗೆ ಸಾರಿಗೆ ನೌಕರರು ಸಹ ಬೆಂಬಲಿಸಿದ್ದಾರೆ. ಈ ಬಗ್ಗೆ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್ಗೆ KSRTC, BMTC ನೌಕರರ ಸಂಘದಿಂದ ಕೂಡ ಬೆಂಬಲ ಇದೆ. ಸಾರಿಗೆ ನೌಕರನ ಮೇಲಿನ ಹಲ್ಲೆ ಖಂಡನೀಯ. ಕರ್ನಾಟಕ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…