ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.
ವಿಧಾನಸಭೆಯಲ್ಲಿಂದು ಸಚಿವ ಎಚ್.ಕೆ.ಪಾಟೀಲ್ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಭಾತ್ಯಾಗ ಮಾಡಿತು.
ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಸಂವಿಧಾನದ ಮೂಲಭೂತ ತತ್ವಗಳನ್ನು ಉಲ್ಲಂಘಿಸುವ ನಿಬಂಧನೆಗಳನ್ನು ಒಳಗೊಂಡಿರುವ ವಕ್ಫ್ ಮಸೂದೆ, 2024ನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಬೇಕು ಎಂದು ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ ಎಂದು ಹೇಳಿದರು.
ಬಿಜೆಪಿ ಶಾಸಕರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದು ಮಿತಿ ಮೀರಿದ ಓಲೈಕೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…