ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.
ವಿಧಾನಸಭೆಯಲ್ಲಿಂದು ಸಚಿವ ಎಚ್.ಕೆ.ಪಾಟೀಲ್ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಭಾತ್ಯಾಗ ಮಾಡಿತು.
ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಸಂವಿಧಾನದ ಮೂಲಭೂತ ತತ್ವಗಳನ್ನು ಉಲ್ಲಂಘಿಸುವ ನಿಬಂಧನೆಗಳನ್ನು ಒಳಗೊಂಡಿರುವ ವಕ್ಫ್ ಮಸೂದೆ, 2024ನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಬೇಕು ಎಂದು ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ ಎಂದು ಹೇಳಿದರು.
ಬಿಜೆಪಿ ಶಾಸಕರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದು ಮಿತಿ ಮೀರಿದ ಓಲೈಕೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…