ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ.
ವಾಲ್ಮೀಕಿ, ಮುಡಾ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಹಣ ಬಳಸಿಕೊಂಡಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಸದನ ಆರಂಭಕ್ಕೂ ಮುನ್ನ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ಬಿಜೆಪಿ ನಾಯಕರು, ಸಿಎಂ ಸಿದ್ದರಾಮಯ್ಯ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆ ನಡೆಯುತ್ತಿದ್ದ ವೇಳೆಯೇ ಸಿಎಂ ಸಿದ್ದರಾಮಯ್ಯ ಕಾರು ಆಗಮಿಸಿತ್ತು. ಪರಿಣಾಮ ಸಿಎಂ ಸಿದ್ದರಾಮಯ್ಯರಿಗೂ ಪ್ರತಿಭಟನೆಯ ಬಿಸಿ ತಟ್ಟಿತು.
ಇನ್ನೂ ಆಂಧ್ರಪ್ರದೇಶದತ್ತ ತೆರಳಿದ್ದ ಕೈ ಶಾಸಕ ಬಸನಗೌಡ ದದ್ದಲ್ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿ ಎಲ್ಲರಿಗೂ ಆಶ್ಚರ್ಯ ಮೂಡಿಸಿದರು.
ಸದನದ ಹೊರಗೆ ದೊಡ್ಡ ಪ್ರತಿಭಟನೆ ನಡೆಸಿದ ಬಿಜೆಪಿ, ಸದನದ ಒಳಗೂ ಪ್ರತಿಭಟನೆ ನಡೆಸಲು ಪ್ಲಾನ್ ರೂಪಿಸಿದೆ.
ಕಲಾಪದಲ್ಲಿ ಮುಡಾ ಮತ್ತು ವಾಲ್ಮೀಕಿ ಅಕ್ರಮವನ್ನು ಪ್ರಸ್ತಾಪಿಸಲು ಬಿಜೆಪಿ-ಜೆಡಿಎಸ್ ನಿರ್ಧಾರ ಮಾಡಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ತಂತ್ರಕ್ಕೆ ಕಾಂಗ್ರೆಸ್ ಕೂಡ ಪ್ರತಿತಂತ್ರ ಹಾಕಲು ಸರ್ವ ರೀತಿಯಲ್ಲೂ ಸಜ್ಜಾಗಿದೆ ಎನ್ನಲಾಗಿದೆ.
ಸದ್ಯ ಇಂದು ಅಗಲಿದ ಗಣ್ಯರಿಗೆ ವಿಧಾನಸಭೆ ಕಲಾಪದಲ್ಲಿ ಸಂತಾಸ ಸೂಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅಸಲಿ ಯುದ್ಧ ಶುರುವಾಗಲಿದೆ ಎನ್ನಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…