ಬೆಂಗಳೂರು: ರಾಜ್ಯಾದ್ಯಾಂತ ನಾಳೆ (ನ.20) ಮದ್ಯ ಮಾರಾಟ ಬಂದ್ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ಇಂದು ವಾಪಾಸ್ ಪಡೆಯಲಾಗಿದೆ.
ರಾಜ್ಯ ಸರ್ಕಾರದ ಮುಂದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಕರುಣಾಕರ ಹೆಗಡೆ ಇಂದು(ನ.19) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಂಧಾನ ಮಾಡಿಕೊಂಡಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದನ್ನು ಹಿಂಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಾರ್ ಅಸೋಸಿಯೇಷನ್ನ ವಿವಿಧ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗಾಗಿ ಮದ್ಯ ಮಾರಾಟ ಬಂದ್ ಅನ್ನು ವಾಪಾಸ್ ಪಡೆಯಲಾಗುತ್ತಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ತಿಳಿಸಿದ್ದಾರೆ.
ರಾಜ್ಯಾದ್ಯಾಂತ ಮದ್ಯ ಮಾರಾಟ ಬಂದ್ಗೆ ಕರೆ ಯಾಕೆ?
ರಾಜ್ಯ ಸರ್ಕಾರದ ಮುಂದೆ ಬಾರ್ ಅಸೋಸಿಯೇಷನ್ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅದನ್ನು ಕಡಿಮೆ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರು. ಇಲ್ಲವಾದರೆ ನವೆಂಬರ್ 20ರಂದು ರಾಜ್ಯಾದ್ಯಾಂತ ಬಾರ್ಗಳಲ್ಲಿ ಮದ್ಯ ಮಾರಾಟ ಮಾಡದೇ ಬಂದ್ ಮಾಡಲಾಗುವುದು ಎಂದು ಆಗ್ರಹಿಸಿದ್ದರು.
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…