Categories: ರಾಜ್ಯ

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ; ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್‌ ವಾಪಸ್‌

ಬೆಂಗಳೂರು: ರಾಜ್ಯಾದ್ಯಾಂತ ನಾಳೆ (ನ.20) ಮದ್ಯ ಮಾರಾಟ ಬಂದ್‌ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಇಂದು ವಾಪಾಸ್‌ ಪಡೆಯಲಾಗಿದೆ.

ರಾಜ್ಯ ಸರ್ಕಾರದ ಮುಂದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ವೈನ್ಸ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ಕರುಣಾಕರ ಹೆಗಡೆ ಇಂದು(ನ.19) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಂಧಾನ ಮಾಡಿಕೊಂಡಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದನ್ನು ಹಿಂಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಾರ್‌ ಅಸೋಸಿಯೇಷನ್‌ನ ವಿವಿಧ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗಾಗಿ ಮದ್ಯ ಮಾರಾಟ ಬಂದ್‌ ಅನ್ನು ವಾಪಾಸ್‌ ಪಡೆಯಲಾಗುತ್ತಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್‌ ತಿಳಿಸಿದ್ದಾರೆ.

ರಾಜ್ಯಾದ್ಯಾಂತ ಮದ್ಯ ಮಾರಾಟ ಬಂದ್‌ಗೆ ಕರೆ ಯಾಕೆ?
ರಾಜ್ಯ ಸರ್ಕಾರದ ಮುಂದೆ ಬಾರ್‌ ಅಸೋಸಿಯೇಷನ್‌ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅದನ್ನು ಕಡಿಮೆ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರು. ಇಲ್ಲವಾದರೆ ನವೆಂಬರ್‌ 20ರಂದು ರಾಜ್ಯಾದ್ಯಾಂತ ಬಾರ್‌ಗಳಲ್ಲಿ ಮದ್ಯ ಮಾರಾಟ ಮಾಡದೇ ಬಂದ್‌ ಮಾಡಲಾಗುವುದು ಎಂದು ಆಗ್ರಹಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

2 hours ago

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

2 hours ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

2 hours ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

2 hours ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

2 hours ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

3 hours ago