Categories: ರಾಜ್ಯ

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ; ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್‌ ವಾಪಸ್‌

ಬೆಂಗಳೂರು: ರಾಜ್ಯಾದ್ಯಾಂತ ನಾಳೆ (ನ.20) ಮದ್ಯ ಮಾರಾಟ ಬಂದ್‌ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಇಂದು ವಾಪಾಸ್‌ ಪಡೆಯಲಾಗಿದೆ.

ರಾಜ್ಯ ಸರ್ಕಾರದ ಮುಂದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ವೈನ್ಸ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ಕರುಣಾಕರ ಹೆಗಡೆ ಇಂದು(ನ.19) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಂಧಾನ ಮಾಡಿಕೊಂಡಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದನ್ನು ಹಿಂಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಾರ್‌ ಅಸೋಸಿಯೇಷನ್‌ನ ವಿವಿಧ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗಾಗಿ ಮದ್ಯ ಮಾರಾಟ ಬಂದ್‌ ಅನ್ನು ವಾಪಾಸ್‌ ಪಡೆಯಲಾಗುತ್ತಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್‌ ತಿಳಿಸಿದ್ದಾರೆ.

ರಾಜ್ಯಾದ್ಯಾಂತ ಮದ್ಯ ಮಾರಾಟ ಬಂದ್‌ಗೆ ಕರೆ ಯಾಕೆ?
ರಾಜ್ಯ ಸರ್ಕಾರದ ಮುಂದೆ ಬಾರ್‌ ಅಸೋಸಿಯೇಷನ್‌ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅದನ್ನು ಕಡಿಮೆ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರು. ಇಲ್ಲವಾದರೆ ನವೆಂಬರ್‌ 20ರಂದು ರಾಜ್ಯಾದ್ಯಾಂತ ಬಾರ್‌ಗಳಲ್ಲಿ ಮದ್ಯ ಮಾರಾಟ ಮಾಡದೇ ಬಂದ್‌ ಮಾಡಲಾಗುವುದು ಎಂದು ಆಗ್ರಹಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

16 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago