ಬೆಂಗಳೂರು: ರಾಜ್ಯಾದ್ಯಾಂತ ನಾಳೆ (ನ.20) ಮದ್ಯ ಮಾರಾಟ ಬಂದ್ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ಇಂದು ವಾಪಾಸ್ ಪಡೆಯಲಾಗಿದೆ.
ರಾಜ್ಯ ಸರ್ಕಾರದ ಮುಂದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಕರುಣಾಕರ ಹೆಗಡೆ ಇಂದು(ನ.19) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಂಧಾನ ಮಾಡಿಕೊಂಡಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದನ್ನು ಹಿಂಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಾರ್ ಅಸೋಸಿಯೇಷನ್ನ ವಿವಿಧ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗಾಗಿ ಮದ್ಯ ಮಾರಾಟ ಬಂದ್ ಅನ್ನು ವಾಪಾಸ್ ಪಡೆಯಲಾಗುತ್ತಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ತಿಳಿಸಿದ್ದಾರೆ.
ರಾಜ್ಯಾದ್ಯಾಂತ ಮದ್ಯ ಮಾರಾಟ ಬಂದ್ಗೆ ಕರೆ ಯಾಕೆ?
ರಾಜ್ಯ ಸರ್ಕಾರದ ಮುಂದೆ ಬಾರ್ ಅಸೋಸಿಯೇಷನ್ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅದನ್ನು ಕಡಿಮೆ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರು. ಇಲ್ಲವಾದರೆ ನವೆಂಬರ್ 20ರಂದು ರಾಜ್ಯಾದ್ಯಾಂತ ಬಾರ್ಗಳಲ್ಲಿ ಮದ್ಯ ಮಾರಾಟ ಮಾಡದೇ ಬಂದ್ ಮಾಡಲಾಗುವುದು ಎಂದು ಆಗ್ರಹಿಸಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…