Mysore
34
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ..

ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ ಮನುಷ್ಯರು ಮಾತ್ರವಲ್ಲದೇ ಪ್ರಾಣಿ-ಪಕ್ಷಿಗಳು ಹಾಗೂ ಜಲಚರಗಳು ಸಹ ಬಿಸಿಲ ಬೇಗೆಗೆ ತತ್ತರಿಸಿ ಹೋಗಿವೆ.

ರಾಜ್ಯದ ಎರಡನೇ ಅತಿ ದೊಡ್ಡ ಮೊಟೆ ಹಾಗೂ ಚಿಕನ್‌ ಉತ್ಪಾದನಾ ಕೇಂದ್ರವಾದ ಕೊಪ್ಪಳ ಜಿಲ್ಲೆಯಲ್ಲಿ ಬಿಸಿಲಿನ ತಾಪ ತಾಳಲಾರದೇ ಕೋಳಿಗಳು ಸಾವನ್ನಪ್ಪುತ್ತಿವೆ.

ಇನ್ನು ಬಿಸಿಲಿನ ಬೇಗೆಗೆ ಜಲಮೂಲಗಳು ಬತ್ತುತ್ತಿದ್ದು, ನೀರು ಕಲುಷಿತಗೊಂಡು ಆಮ್ಲಜನಕದ ಕೊರತೆಯಿಂದ ಚಿಕ್ಕಬಳ್ಳಾಪುರದ ಕಂದವಾರ ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಹೈರಾಣಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇನ್ನು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ದಾಟುತ್ತಿದ್ದು, ಬಿಸಿಲಿನಿಂದ ಪಾರಾಗಲು ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಂಬರುವ ದಿನಗಳಲ್ಲಿ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಲಕ್ಷಣಗಳು ಕಾಣಿಸುತ್ತಿವೆ.

 

 

Tags:
error: Content is protected !!