ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ..
ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ ಮನುಷ್ಯರು ಮಾತ್ರವಲ್ಲದೇ ಪ್ರಾಣಿ-ಪಕ್ಷಿಗಳು ಹಾಗೂ ಜಲಚರಗಳು ಸಹ ಬಿಸಿಲ ಬೇಗೆಗೆ ತತ್ತರಿಸಿ ಹೋಗಿವೆ.
ರಾಜ್ಯದ ಎರಡನೇ ಅತಿ ದೊಡ್ಡ ಮೊಟೆ ಹಾಗೂ ಚಿಕನ್ ಉತ್ಪಾದನಾ ಕೇಂದ್ರವಾದ ಕೊಪ್ಪಳ ಜಿಲ್ಲೆಯಲ್ಲಿ ಬಿಸಿಲಿನ ತಾಪ ತಾಳಲಾರದೇ ಕೋಳಿಗಳು ಸಾವನ್ನಪ್ಪುತ್ತಿವೆ.
ಇನ್ನು ಬಿಸಿಲಿನ ಬೇಗೆಗೆ ಜಲಮೂಲಗಳು ಬತ್ತುತ್ತಿದ್ದು, ನೀರು ಕಲುಷಿತಗೊಂಡು ಆಮ್ಲಜನಕದ ಕೊರತೆಯಿಂದ ಚಿಕ್ಕಬಳ್ಳಾಪುರದ ಕಂದವಾರ ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಹೈರಾಣಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇನ್ನು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟುತ್ತಿದ್ದು, ಬಿಸಿಲಿನಿಂದ ಪಾರಾಗಲು ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮುಂಬರುವ ದಿನಗಳಲ್ಲಿ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಲಕ್ಷಣಗಳು ಕಾಣಿಸುತ್ತಿವೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…