ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ‘ಕರ್ನಾಟಕ ಭಾರತ್ ಗೌರವ್ ಯಾತ್ರೆ’ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ.ಖರ್ಚಗಲಿದ್ದು, ರಾಜ್ಯ ಸರ್ಕಾರವು 5 ಸಾವಿರ ರೂ. ಸಹಾಯಧನ ನೀಡಲಿದೆ. ಉಳಿದ 10 ಸಾವಿರ ರೂ. ಯಾತ್ರಿಯೇ ಭರಿಸಬೇಕಿದೆ.
ಈ ಯಾತ್ರೆ ರಾಮೇಶ್ವರ-ಕನ್ಯಾಕುಮಾರಿ-ಮಧುರೈ ಮತ್ತು ತಿರುವನಂತಪುರಂ ಅನ್ನು ಒಳಗೊಂಡಿದೆ. ಐಆರ್ಸಿಟಿಸಿ/ ಐಟಿಎಂಎಸ್ ವೆಬ್ಸೈಟ್ ಮೂಲಕ 18/1/2024ರಿಂದ ಬುಕ್ಕಿಂಗ್ ಆರಂಭವಾಗಲಿದೆ.
ಈ ವಿಶೇಷ ರೈಲು ಹೊರಡಲಿರುವ ದಿನಾಂಕಗಳು. ನಿರ್ಗಮನ 18/1/2024, ಆಗಮನ 23/1/2024. ನಿರ್ಗಮನ 30/1/2024, ಆಗಮನ 4/2/2024 ಆಗಿದೆ.
ರಾಮೇಶ್ವರ- ರಾಮೇಶ್ವರ ದೇವಾಲಯ. ಕನ್ಯಾಕುಮಾರಿ- ಶ್ರೀ ಭಗವತಿ ದೇವಾಲಯ. ಮಧುರೈ- ಶ್ರೀ ಮೀನಾಕ್ಷಿ ದೇವಾಲಯ. ತಿರುವನಂತಪುರಂ- ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯಗಳ ದರ್ಶನವನ್ನು ಈ ಪ್ಯಾಕೇಜ್ ನಲ್ಲಿ ನೀಡಲಾಗುತ್ತದೆ.
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…