ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ‘ಕರ್ನಾಟಕ ಭಾರತ್ ಗೌರವ್ ಯಾತ್ರೆ’ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ.ಖರ್ಚಗಲಿದ್ದು, ರಾಜ್ಯ ಸರ್ಕಾರವು 5 ಸಾವಿರ ರೂ. ಸಹಾಯಧನ ನೀಡಲಿದೆ. ಉಳಿದ 10 ಸಾವಿರ ರೂ. ಯಾತ್ರಿಯೇ ಭರಿಸಬೇಕಿದೆ.
ಈ ಯಾತ್ರೆ ರಾಮೇಶ್ವರ-ಕನ್ಯಾಕುಮಾರಿ-ಮಧುರೈ ಮತ್ತು ತಿರುವನಂತಪುರಂ ಅನ್ನು ಒಳಗೊಂಡಿದೆ. ಐಆರ್ಸಿಟಿಸಿ/ ಐಟಿಎಂಎಸ್ ವೆಬ್ಸೈಟ್ ಮೂಲಕ 18/1/2024ರಿಂದ ಬುಕ್ಕಿಂಗ್ ಆರಂಭವಾಗಲಿದೆ.
ಈ ವಿಶೇಷ ರೈಲು ಹೊರಡಲಿರುವ ದಿನಾಂಕಗಳು. ನಿರ್ಗಮನ 18/1/2024, ಆಗಮನ 23/1/2024. ನಿರ್ಗಮನ 30/1/2024, ಆಗಮನ 4/2/2024 ಆಗಿದೆ.
ರಾಮೇಶ್ವರ- ರಾಮೇಶ್ವರ ದೇವಾಲಯ. ಕನ್ಯಾಕುಮಾರಿ- ಶ್ರೀ ಭಗವತಿ ದೇವಾಲಯ. ಮಧುರೈ- ಶ್ರೀ ಮೀನಾಕ್ಷಿ ದೇವಾಲಯ. ತಿರುವನಂತಪುರಂ- ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯಗಳ ದರ್ಶನವನ್ನು ಈ ಪ್ಯಾಕೇಜ್ ನಲ್ಲಿ ನೀಡಲಾಗುತ್ತದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…