ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೆಲೆ ಏರಿಕೆ ಖಂಡಿಸಿ ಜುಲೈ 3 ಅಥವಾ 4ರಂದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಕರ್ನಾಟಕ ಸರ್ಕಾರ ಒಂದು ರೀತಿ ಹುಚ್ಚರ ಸಂತೆಯಾಗಿದೆ.ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದಾಯ್ತು ಇದೀಗ ಹಾಲಿನ ದರ ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದೆ ಎಂದು ಕಿಡಿಕಾರಿದರು.
ತುಘಲಕ್ ರೀತಿ ಕಾಂಗ್ರೆಸ್ ಸರ್ಕಾರವನ್ನು ನಡೆಸುತ್ತಿದೆ
ಈ ತಿಂಗಳು, ಮುಂದಿನ ತಿಂಗಳು ಸರ್ಕಾರದ ಬಳಿ ಹಣವೇ ಇಲ್ಲ. ಇದೇ ವೇಳೆ ವೇತನ ಪರಿಷ್ಕರಣೆ ಕೂಡ ಕ್ಯಾಬಿನೆಟ್ ಬಳಿ ಬಂದಿದೆ. ಐದಲ್ಲ ಐವತ್ತು ಗ್ಯಾರಂಟಿ ಕೊಡಿ, ಆದರೆ ವೈಜ್ಞಾನಿಕವಾಗಿ ಮಾಡಿ. ತುಘಲಕ್ ರೀತಿ ಕಾಂಗ್ರೆಸ್ ಸರ್ಕಾರವನ್ನು ನಡೆಸುತ್ತಿದೆ. ಚುನಾವಣೆಯಲ್ಲಿ ಜನ ನಿಮ್ಮ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಜನ ಇಷ್ಟು ಛೀಮಾರಿ ಹಾಕಿದ್ರೂ ನಿಮಗೆ ನಾಚಿಗೆ ಆಗಿಲ್ಲ. ಎಂಪಿ ಚುನಾವಣೆಯಲ್ಲಿ ಮತ ಹಾಕಿಲ್ಲ ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…