Mysore
25
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಕಾಂಗ್ರೆಸ್‌ ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರವನ್ನು ಏರಿಕೆ ಮಾಡಿ ಹಗಲು ದರೋಡೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ರೈತರ ಹೆಸರಲ್ಲಿ ಲೂಟಿಕೋರ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಂದ ಹಗಲು ದರೋಡೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಹಾಲು ಉತ್ಪಾದನೆ ಹೆಚ್ಚಳ ಆಗಿದೆ ಎಂದು ಊಸರವಳ್ಳಿ ನಾಟಕ ಮಾಡಿ ದರ ಹೆಚ್ಚಿಸಿರುವ ಭ್ರಷ್ಟ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇದೀಗ 50ml ಹಾಲನ್ನು ಕಡಿತಗೊಳಿಸಿ 5 ರೂಪಾಯಿ ದರವನ್ನು ಏರಿಕೆ ಮಾಡಿದೆ. ಹೊಸ ವರ್ಷಕ್ಕೆ ಜನರಿಗೆ ಸಿಹಿ ಸುದ್ಧಿ ನೀಡಬೇಕಾದ ಸರ್ಕಾರ, ಸಂಕ್ರಾಂತಿಗೆ ಕಹಿ ಕೊಟ್ಟು ತಾನು ಮಾತ್ರ ಬೆಲ್ಲ ತಿನ್ನುತ್ತಿದೆ ಕಾಂಗ್ರೆಸ್ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Tags:
error: Content is protected !!